Lok Sabha Election 2024 news : ಬಲಿಷ್ಟ ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಬಲಿಷ್ಠ ನಾಯಕರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಗದಗ ವಿಧಾನಸಭಾ ಕ್ಷೇತ್ರದ ಕುರ್ತಕೋಟಿ, ಹರ್ತಿ, ಕಣವಿ, ಹೊಸೂರು ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಗ್ರಾಮಪಂಚಾಯಿತಿಗೆ ರಸ್ತೆ, ದ್ವೀಪ ಹಾಕಿಸಿಕೊಡದಂತಹ ದುಃಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ನಾವು ಹೇಳುತ್ತಿಲ್ಲ.
ಗದಗ: ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.
Lok Sabha Election 2024 : ರಾಹುಲ್ ಗಾಂಧಿ ನಾನು ಪ್ರಧಾನಿ ಆಗುವುದಿಲ್ಲ ಅಂತ ಹೇಳಿದ್ದಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಅದು ರಾಹುಲ್ ಗಾಂಧಿ. ಸವಾಲನ್ನು ಸ್ವೀಕಾರ ಮಾಡಿ ಅದನ್ನು ಗೆಲುವಾಗಿ ಪರಿವರ್ತಿಸುವ ಛಲ ನರೇಂದ್ರ ಮೋದಿಯವರಿಗೆ ಮಾತ್ರ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Basavaraj Bommai: ಮೋದಿಯವರು ತಮ್ಮ ತಾಯಿ ತೀರಿ ಹೋದಾಗ ಕೇವಲ ಎರಡು ತಾಸಿನಲ್ಲಿ ಅವರ ಅಂತ್ಯ ಸಂಸ್ಕಾರ ಮುಗಿಸಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದರು. ದೇಶದ ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡಿದರು. ಇಡೀ ದೇಶದ ಜನಸಂಖ್ಯೆಯನ್ನು ಆಸ್ತಿಯನ್ನಾಗಿ ಪರಿಗಣಿಸಿ ದೇಶದ ಅಭಿವೃದ್ದಿಗೆ ಜನಸಂಖ್ಯೆ ಕಾರಣ ಅಂತ ಜಗತ್ತಿಗೆ ತೊರಿಸಿ ಕೊಟ್ಟರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ.
ಗದಗ: ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿಗ್ಲಿ, ದೊಡ್ಡೂರು, ಕುರುಡಗಿ, ಸೂರಣಗಿ, ಬಾಲೆಹೊಸೂರು ಗ್ರಾಮಗಳಲ್ಲಿ ರೋಡ್ ಶೋ ಮಾಡಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
Lok Sabha Elections 2024: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎನ್ನುವುದನ್ನು ಎಂದು ಬಹಿರಂಗಪಡಿಸಲಿ ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
Lok Sabha election 2024 : ಪ್ರತಿಯೊಬ್ಬರಿಗೂ ಸೂರು ಸಿಗಬೇಕೆಂದರೆ ಮೋದಿ ಪ್ರಧಾನಿ ಆಗಬೇಕು. ಜೋಶಿ ಅವರು ಅತ್ಯಂತ ದಕ್ಷತೆಯಿಂದ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ನಮಗೆಲ್ಲ ಜೋಶಿ ಅವರು ಹೆಸರು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು..
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಬಂಡಾಯ ವಿಚಾರ
ಮಗನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಈಶ್ವರಪ್ಪ ಬೇಜಾರಾಗಿದ್ದಾರೆ
ವರಿಷ್ಠರು ಅವರ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ
ಹಾವೇರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ
ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ಧೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದೇಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.