Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Lok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕುಮಟಾ: ಕುಮಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.
Lok Sabha Election 2024: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.
Hassan Pen Drive Case: ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, FIR ದಾಖಲಿಸುತ್ತಾನೆ ಅನ್ನೋದು ಆತನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ವಿದೇಶ ಪ್ರಯಾಣ FIR ಆಗುವ ಮೊದಲೇ ನಿರ್ಧಾರವಾಗಿತ್ತು ಅಂತಾ ಹೇಳಿದ್ದಾರೆ.
ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರು ಒಂದಷ್ಟು ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಂತಹವರಿಂದ ಪ್ರಧಾನಿ ಹುದ್ದೆಗೆ ಗೌರವ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
Lok Sabha Election 2024: ಪ್ರಧಾನಿ ಮೋದಿಯವರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Chief Minister Siddaramaiah: ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ವಿವರಿಸಿದರು.ಅಲ್ಪ ಸಂಖ್ಯಾತರ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಪ್ರಸ್ತಾಪಿಸಿದರು.
Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಏಲ್ಲಿ ಮುಸ್ಲಿಂಮರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದರು.
Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.