ತೋಟದ ಮನೆಗಳ ಸಮೀಪವೇ ಮರಿ ಹಾಕಿದ ಚಿರತೆ: ಕ್ಯಾಮರಾ ಅಳವಡಿಸಿದ ಅರಣ್ಯ ಇಲಾಖೆ

ಕಬ್ಬಿನ ಫಸಲನ್ನು ಕಟಾವು ಮಾಡುವಾಗ ಈ ಚಿರತೆ ಮರಿಗಳು ಪತ್ತೆಯಾಗಿವೆ. ಪತ್ತೆಯಾದ ಮರಿಗಳು 15-20 ದಿನಗಳ ಅವಧಿಯದಾಗಿವೆ ಎಂದು ಹೇಳಲಾಗಿದೆ.

Written by - Ranjitha R K | Last Updated : Dec 26, 2022, 09:33 AM IST
  • ತೋಟದ ಮನೆಗಳ ಸಮೀಪವೇ ಮರಿ ಹಾಕಿದ ಚಿರತೆ
  • ಕಬ್ಬಿನ ಫಸಲನ್ನು ಕಟಾವು ಮಾಡುವಾಗ ಚಿರತೆ ಮರಿ ಪತ್ತೆ
  • ಸ್ಥಳದಲ್ಲಿ ಕ್ಯಾಮರಾ ಅಳವಡಿಸಿ ಚಿರತೆ ಓಡಾಟದ ಮೇಲೆ ನಿಗಾ
 ತೋಟದ ಮನೆಗಳ ಸಮೀಪವೇ ಮರಿ ಹಾಕಿದ ಚಿರತೆ: ಕ್ಯಾಮರಾ ಅಳವಡಿಸಿದ ಅರಣ್ಯ ಇಲಾಖೆ title=

ಚಾಮರಾಜನಗರ : ಚಿರತೆಯೊಂದು ತೋಟದ ಮನೆಗಳ ಸಮೀಪವೇ ಎರಡು ಮರಿಗಳನ್ನು ಹಾಕಿದೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಡುವ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ  ಚಿರತೆ ಮರಿಗಳು ಪತ್ತೆಯಾಗಿವೆ. 

ಕಟ್ನವಾಡಿ ಗ್ರಾಮದ ಗುರು ಎಂಬವರು ಕಬ್ಬಿನ ಫಸಲನ್ನು ಕಟಾವು ಮಾಡುವಾಗ ಈ ಚಿರತೆ ಮರಿಗಳು ಪತ್ತೆಯಾಗಿವೆ. ಪತ್ತೆಯಾದ ಮರಿಗಳು  15-20 ದಿನಗಳ ಅವಧಿಯದಾಗಿವೆ ಎಂದು ಹೇಳಲಾಗಿದೆ. ವಿಚಾರ ತಿಳಿದ ಚಾಮರಾಜನಗರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಚಿರತೆ ಮರಿಗಳನ್ನು ಜಮೀನಿನಲ್ಲೇ ಬಿಟ್ಟು ನಿಗಾ ಇಟ್ಟಿದ್ದಾರೆ. 

ಇದನ್ನೂ ಓದಿ : Basavaraj Bommai : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್ : ಇಂದು ದೆಹಲಿಗೆ ಹೊರಟ ಸಿಎಂ!

ಚಿರತೆ ಮರಿ ಹಾಕಿರುವ ಸ್ಥಳದಿಂದ 70-100 ಮೀ. ಅಂತರದಲ್ಲೇ ತೋಟದ ಮನೆಗಳು, ಜನರ ಓಡಾಟ ಹೆಚ್ಚಾಗಿದೆ. ಈ ಪ್ರದೇಶದಲ್ಲಿ ಮರಿಗಳನ್ನು ಹಾಕಿದ ಬಳಿಕವೂ ಚಿರತೆ ಜನರಿಗೆ ಕಾಣದಿರುವುದು ನಿಜಕ್ಕೂ ಆಶ್ಚರ್ಯ. ತಾಯಿ ಚಿರತೆ ಮರಿಗಳನ್ನು ಕರೆದೊಯ್ಯಲಿದೆ ಎಂದು ಅರಣ್ಯ ಇಲಾಖೆಯು ಕ್ಯಾಮರಾಗಳನ್ನು ಅಳವಡಿಸಿ ನಿಗಾ ಇಟ್ಟಿದೆ‌‌. ಮರಿಗಳು ಪತ್ತೆಯಾದ ಬಳಿಕ ರೈತರು ಮರಿಗಳೊಟ್ಟಿಗೆ ಫೋಟೋ ಕ್ಲಿಕ್ಲಿಸಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟ್ಗಳು ಕೂಡಾ ಭಾರೀ ವೈರಲ್ ಆಗಿದೆ.  

ಇದನ್ನೂ ಓದಿ : ಜಮೀನಿನಲ್ಲಿದ್ದ ಕುರುಡನ ಮೇಲೆ ಕಾಡಾನೆ ದಾಳಿ- ಕೈ-ಕಾಲು ಮುರಿತ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News