Anna Bhagya scheme: ʼ10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ. ಸಿಎಂ ಸಿದ್ದರಾಮಯ್ಯನವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ ಎಂದು ಬಿಜೆಪಿ ಕುಟುಕಿದೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
BJP vs Congress: ಸಿಎಂ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು ಎಂದು ಬಿಜೆಪಿ ಟೀಕಿಸಿದೆ.
BJP vs Congress: ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆ ಎಂದು ಬಿಜೆಪಿ ಟೀಕಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ನೆರೆಯ ಮಹಾರಾಷ್ಟ್ರದಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ ಎಂಬ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿಯ ಕೋಮುವಾದ ಹಾಗೂ ವಿಭಜನಾತ್ಮಕ ರಾಜಕಾರಣ, ಸುಳ್ಳುಗಳಿಂದ ದಿಕ್ಕು ತಪ್ಪಿಸುವ ಪ್ರಾಪಗಾಂಡಕ್ಕೆ ಯಾವ ಮಿತಿಯೂ ಇಲ್ಲದಂತಾಗಿದೆ. ಸುಳ್ಳು ಹಾಗೂ ದ್ವೇಷದಿಂದ ಕೂಡಿದ ಪೋಸ್ಟನ್ನು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗದ ನಿರ್ದೇಶನವು ಬಂಡತನದ ಬಿಜೆಪಿಗೆ ಕಾಪಾಳಮೋಕ್ಷಕ್ಕೆ ಸಮನಾದ ಅವಮಾನವಾಗಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
Lokshabha Elections 2024: ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ.
Karnataka Lok Sabha election 2024 : ಬಿಜೆಪಿಯವರು, ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಆದಾಯ ಹೆಚ್ಚಿರುವ ದೇವಸ್ಥಾನಗಳಿಂದ ಕಡಿಮೆ ಆದಾಯವಿರುವ ಹಿಂದೂ ದೇವಾಲಯಗಳಿಗೆ ಬಳಸುವುದನ್ನು ವಿರೋಧಿಸುತ್ತಾರೆ. ಬೇರೆ ಯಾವ ಧರ್ಮದ ದೇವಾಲಯಗಳಿಗೂ ಇದನ್ನು ಬಳಸುವುದಿಲ್ಲ. ಅವರಿಗೆ ಪರಿಷತ್ತಿನಲ್ಲಿ ಬಹುಮತ ಇದೆ ಎಂದು ಹೀಗೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಈ ಕಾರಣಕ್ಕೇ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ.
ಬಿಜೆಪಿ, ಜೆಡಿಎಸ್ ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ ಹಿಂದೊಮ್ಮೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದರು ಅಂತ ಸಿಎಂ ಸಿದ್ದರಾಮಯ್ಯ ಹೇಳಿದರು.
BJP vs Congress: ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ಕರ್ನಾಟಕ ಬಜೆಟ್ ಬಗ್ಗೆ ಕಿಡಿಕಾರಿದ ಬಿಜೆಪಿ ನಾಯಕರು, ಏನಿಲ್ಲ... ಏನಿಲ್ಲ... ಕಾಂಗ್ರೆಸ್ ಸರ್ಕಾರದ ಬಜೆಟ್ನಲ್ಲಿ ಏನಿಲ್ಲ... ಅಂತಾ ಫ್ಲಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದರು.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ ಎಂದು ಬಿಜೆಪಿ ಟೀಕಿಸಿದೆ.
BJP vs Congress: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ಜನರ ಅಭಿಪ್ರಾಯವನ್ನು ಧಿಕ್ಕರಿಸುವುದು, ಸಂವಿಧಾನವನ್ನು ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ! ಎಂದು ಬಿಜೆಪಿ ಕಿಡಿಕಾರಿದೆ.
ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಆದ್ರೆ ಅವರು ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.