Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ. ಇದುವರೆಗಿನ ವ್ಯವಸ್ಥೆಯಲ್ಲಿ ಲೋಕಸಭೆ ಸ್ಪೀಕರ್ ಸ್ಥಾನದ ಬಲಭಾಗದಲ್ಲಿ ಆಡಳಿತ ಪಕ್ಷದ ಸಂಸದರು ಮತ್ತು ಎಡಭಾಗದಲ್ಲಿ ವಿರೋಧ ಪಕ್ಷದ ಸಂಸದರು ಕುಳಿತುಕೊಳ್ಳುತ್ತಾರೆ.ಈ ಬಾರಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿಂದ ಗೆಲ್ಲುವ ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲಿದ್ದಾರೆ.
Lok Sabha Election Result 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 242 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಸರಳ ಬಹುಮತ ಸಿಕ್ಕಿಲ್ಲ. ಹೀಗಾಗಿ ಮಿತ್ರಪಕ್ಷಗಳ ಜೊತೆಗೆ ಮೈತ್ರಿ ನಿಭಾಯಿಸುವುದು ಕಷ್ಟವಾಗಲಿದೆ. ವಿಶೇಷವಾಗಿ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆಗೆ ಹೊಂದಾಣಿಕೆ ಕಷ್ಟವೆಂದು ಹೇಳಲಾಗುತ್ತಿದೆ.
Bollywood queen Kangana Ranaut: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಲೋಕಸಭೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.. ಇಂದು ಅವರ ಭವಿಷ್ಯ ನಿರ್ಧಾರವಾಗಲಿದ್ದು, ಇದೇ ವೇಳೆ ನಟಿ ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗಕ್ಕೆ ಗುಡ್ಬಾಯ್ ಹೇಳ್ತಾರಾ ಎನ್ನುವ ಚರ್ಚೆಯೊಂದು ನಡೆಯುತ್ತಿದೆ..
Zee AI Exit Poll: ZEE NEWS AI ಎಕ್ಸಿಟ್ ಪೋಲ್ ಪ್ರಕಾರ, ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ NDA ಬರೋಬ್ಬರಿ 310 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಕಾಂಗ್ರೆಸ್ ನೇತೃತ್ವದ INDIA 188 ಮತ್ತು45 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿಯಲಾಗಿದೆ.
ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
ಇದೀಗ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮಸ್ಲಿನ್ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
BS Yediyurappa : ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.