‘ಹೊಯ್ಸಳ’ ಟೀಸರ್ ಬಿಡುಗಡೆ; ಖಡಕ್ ಪೊಲೀಸ್ ಆಗಿ ಮಿಂಚಿದ ಡಾಲಿ ಧನಂಜಯ್!

Hoysala Kannada Movie Teaser: ಡಾಲಿ ಧನಂಜಯ್ 25ನೇ ಚಿತ್ರ ಇದಾಗಿದ್ದು, ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್‍ರವರು ಚಿತ್ರವನ್ನು ನಿರ್ಮಿಸಿದ್ದಾರೆ.

Written by - Zee Kannada News Desk | Last Updated : Feb 5, 2023, 02:04 PM IST
  • ನಟರಾಕ್ಷಸ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಟೀಸರ್ ಬಿಡುಗಡೆಯಾಗಿದೆ
  • ನಿಷ್ಠಾವಂತ - ಖಡಕ್ ಪೊಲೀಸ್ ಅಧಿಕಾರಿಯಾಗಿ ಮಿಂಚಿರುವ ಡಾಲಿ ಧನಂಜಯ್
  • ಪೊಲೀಸ್ ಆಫೀಸರ್ "ಗುರುದೇವ್" ಆಗಿ ಮಾರ್ಚ್ 30ರಿಂದ ಚಾರ್ಜ್ ತೆಗೆದುಕೊಳ್ಳಲಿರುವ ಡಾಲಿ
‘ಹೊಯ್ಸಳ’ ಟೀಸರ್ ಬಿಡುಗಡೆ; ಖಡಕ್ ಪೊಲೀಸ್ ಆಗಿ ಮಿಂಚಿದ ಡಾಲಿ ಧನಂಜಯ್! title=
‘ಹೊಯ್ಸಳ’ ಟೀಸರ್ ಬಿಡುಗಡೆ

ಬೆಂಗಳೂರು: ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ "ಹೊಯ್ಸಳ"ದ ಟೀಸರ್ ಭಾನುವಾರ ಬಿಡುಗಡೆಯಾಗಿದೆ. ನಿಷ್ಠಾವಂತ - ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ್, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.

ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್‍ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ್, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿರವರು ‘ಗ್ಲಿಮ್ಪ್ಸ್ ಆಫ್ ಗುರುದೇವ್’ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯ್‍ರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್‍ಗೆ ದಿಗ್ಗಜ ನಟರು ಬರಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Vani Jayaram Death : ಖ್ಯಾತ ಗಾಯಕಿ ವಾಣಿ ಜಯರಾಮ್ ಸಾವಿನ ಬಗ್ಗೆ ಹಲವು ಅನುಮಾನ! ಇದು ಕೊಲೆಯೇ!?

‘ಹೊಯ್ಸಳ’ ಟೀಸರ್‍ನಲ್ಲಿ ಧನಂಜಯ್ರವರ ಖಾಕಿ ಖದರ್ ಹಾಗೂ ಡೈಲಾಗ್‍ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿದ್ದು, ಡಾಲಿ ಧನಂಜಯ್‍ರವರು ಪೊಲೀಸ್ ಆಫೀಸರ್  "ಗುರುದೇವ್" ಆಗಿ ಮಾರ್ಚ್ 30ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

ಡಾಲಿ ಧನಂಜಯ್ರವರ 25ನೇ ಚಿತ್ರ ಇದಾಗಿದ್ದು, ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್‍ರವರು ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: CCL 2023 Time Table: ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್ ಸೇರಿ ಎಲ್ಲ ತಂಡಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ವಿಜಯ್.ಎನ್ ರವರು ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್‍ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ. ದೀಪು ಎಸ್ ಕುಮಾರ್‍ರವರ ಸಂಕಲನವಾದರೆ, ಮಾಸ್ತಿಯವರದ್ದು ಸಂಭಾಷಣೆಯಾಗಿದೆ. ಧನಂಜಯ್ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News