ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ್ ಮಲ್ಯಗೆ ಸಂಕಷ್ಟ, ಜೈಲುವಾಸ ಕನ್ಫರ್ಮ್‌

ದೇಶದ ಉನ್ನತ ನ್ಯಾಯಾಲಯವು ಮಲ್ಯ ಅವರ ಮಕ್ಕಳಿಗೆ ಮಾಡಿದ 40 ಮಿಲಿಯನ್ ಡಾಲರ್ ವಹಿವಾಟು "ಅನೂರ್ಜಿತವಾಗಿದೆ ಮತ್ತು ನಿಷ್ಕ್ರಿಯವಾಗಿದೆ" ಎಂದು ಹೇಳಿದೆ. ಜೊತೆಗೆ ನಾಲ್ಕು ವಾರಗಳಲ್ಲಿ ವಸೂಲಾತಿ ಅಧಿಕಾರಿಗೆ ಶೇ.8 ರಷ್ಟು ಬಡ್ಡಿಯೊಂದಿಗೆ ಮೊತ್ತವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಮೊತ್ತ ಹಿಂತಿರುಗಿಸದಿದ್ದರೆ ಮಲ್ಯ ಅವರ ಆಸ್ತಿಯನ್ನು ಜಪ್ತಿ ಮಾಡುವ ಅನುಮತಿಯನ್ನೂ ಸಹ ಸುಪ್ರೀಂ ನೀಡಿದೆ. 

Written by - Bhavishya Shetty | Last Updated : Jul 11, 2022, 11:33 AM IST
  • 2017ರ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು
  • ವಿಜಯ್‌ ಮಲ್ಯಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು ರೂ. 2,000 ದಂಡ
  • ಸುಪ್ರೀಂ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರಕ್ಕೆ ಠೇವಣಿ ಇಡಬೇಕು ಎಂದು ಆದೇಶ
ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ್ ಮಲ್ಯಗೆ ಸಂಕಷ್ಟ, ಜೈಲುವಾಸ ಕನ್ಫರ್ಮ್‌ title=
Vijay Mallya

ನವದೆಹಲಿ: 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಇಂದು ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು ರೂ. 2,000 ದಂಡ ವಿಧಿಸಿದೆ. 2017ರಲ್ಲಿ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಮಲ್ಯ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ದಂಡವನ್ನು ನಾಲ್ಕು ವಾರಗಳಲ್ಲಿ ಸುಪ್ರೀಂ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರಕ್ಕೆ ಠೇವಣಿ ಇಡಬೇಕು. ತಪ್ಪಿದಲ್ಲಿ ಎರಡು ತಿಂಗಳ ಶಿಕ್ಷೆಯನ್ನು ಹೆಚ್ಚುವರಿಯಾಗಿ ಸೇರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Bigg Boss Kannada: ಶುರುವಾಗಲಿದೆ ಮಿನಿ ಬಿಗ್​ಬಾಸ್! ಯಾರಿಗೆಲ್ಲ ಅವಕಾಶ?

ದೇಶದ ಉನ್ನತ ನ್ಯಾಯಾಲಯವು ಮಲ್ಯ ಅವರ ಮಕ್ಕಳಿಗೆ ಮಾಡಿದ 40 ಮಿಲಿಯನ್ ಡಾಲರ್ ವಹಿವಾಟು "ಅನೂರ್ಜಿತವಾಗಿದೆ ಮತ್ತು ನಿಷ್ಕ್ರಿಯವಾಗಿದೆ" ಎಂದು ಹೇಳಿದೆ. ಜೊತೆಗೆ ನಾಲ್ಕು ವಾರಗಳಲ್ಲಿ ವಸೂಲಾತಿ ಅಧಿಕಾರಿಗೆ ಶೇ.8 ರಷ್ಟು ಬಡ್ಡಿಯೊಂದಿಗೆ ಮೊತ್ತವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಮೊತ್ತ ಹಿಂತಿರುಗಿಸದಿದ್ದರೆ ಮಲ್ಯ ಅವರ ಆಸ್ತಿಯನ್ನು ಜಪ್ತಿ ಮಾಡುವ ಅನುಮತಿಯನ್ನೂ ಸಹ ಸುಪ್ರೀಂ ನೀಡಿದೆ. 

"ದಂಡ ಠೇವಣಿ ಮಾಡದಿದ್ದರೆ, ವಸೂಲಾತಿ ಅಧಿಕಾರಿಯು ಹೇಳಿದ ಮೊತ್ತದ ವಸೂಲಾತಿಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದು. ಭಾರತ ಸರ್ಕಾರ ಮತ್ತು ಎಲ್ಲಾ ಏಜೆನ್ಸಿಗಳು ಆ ಪ್ರಕ್ರಿಯೆಯಲ್ಲಿ ಸಹಾಯ ಮಾಡಬೇಕು" ಎಂದು ನ್ಯಾಯಾಲಯದ ಆದೇಶವು ಹೇಳಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟದ ಮನವಿಯು, ನಿಂದನೆ ಕ್ರಮ ಮತ್ತು ಕಡಲಾಚೆಯ ಸಂಸ್ಥೆ ಡಿಯಾಜಿಯೊದಿಂದ ಪಡೆದ 40 ಮಿಲಿಯನ್ ಡಾಲರ್‌ಗಳನ್ನು ಠೇವಣಿ ಮಾಡಲು ಮಲ್ಯ ಅವರಿಗೆ ನಿರ್ದೇಶನ ನೀಡುವಂತೆ ಕೋರಿದೆ.

ಮಲ್ಯ ಅವರು ಸತ್ಯವನ್ನು ಮರೆಮಾಚಿದ್ದಾರೆ ಮತ್ತು ಹಣವನ್ನು ತಮ್ಮ ಮಗ ಸಿದ್ಧಾರ್ಥ್ ಮಲ್ಯ ಮತ್ತು ಪುತ್ರಿಯರಾದ ಲಿಯಾನಾ ಮಲ್ಯ ಮತ್ತು ತಾನ್ಯಾ ಮಲ್ಯ ಅವರಿಗೆ ವರ್ಗಾಯಿಸಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು "ಉಲ್ಲಂಘಿಸಿದ್ದಾರೆ" ಎಂದು ಬ್ಯಾಂಕ್‌ಗಳು ಆರೋಪಿಸಿದ್ದವು.

ಇದನ್ನೂ ಓದಿ: ಶಾಸಕರಿಗೆ ಭಾವನಾತ್ಮಕ ಪತ್ರ ಬರೆದ ಉದ್ಧವ್ ಠಾಕ್ರೆ: ಹೇಳಿರೋದು ಏನು ಗೊತ್ತಾ?

ಮಲ್ಯ ಅವರು ಈಗ ನಿಷ್ಕ್ರಿಯಗೊಂಡಿರುವ ಕಿಂಗ್‌ಫಿಷರ್ ಏರ್‌ಲೈನ್ಸ್ ಒಳಗೊಂಡ 9,000 ಕೋಟಿಗೂ ಹೆಚ್ಚು ಬ್ಯಾಂಕ್ ಸಾಲದ ಡೀಫಾಲ್ಟ್ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News