ಕಾಂಗ್ರೆಸ್ ಪಕ್ಷ ಗೆದ್ದರೆ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರಲ್ಲ: ಪ್ರಧಾನಿ ಮೋದಿ

Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. 

Written by - Puttaraj K Alur | Last Updated : Apr 22, 2024, 09:59 PM IST
  • ಕಾಂಗ್ರೆಸ್‌ ಆಡಳಿತದಲ್ಲಿ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ
  • ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ಕಿಡಿ
  • ತಾಯಂದಿರು-ಸಹೋದರಿಯರ ಚನ್ನ ಕದಿಯುವುದೇ ಅವರ ಉದ್ದೇಶ
ಕಾಂಗ್ರೆಸ್ ಪಕ್ಷ ಗೆದ್ದರೆ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರಲ್ಲ: ಪ್ರಧಾನಿ ಮೋದಿ title=
ಕಾಂಗ್ರೆಸ್‌ ವಿರುದ್ಧ ಮೋದಿ ಆಕ್ರೋಶ!

ನವದೆಹಲಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ವಶಪಡಿಸಿಕೊಳ್ಳಲು ಮತ್ತು ಅವರ ಜೀವಿತಾವಧಿಯ ಉಳಿತಾಯವನ್ನು ಕಸಿದುಕೊಳ್ಳಲು ಸಂಪತ್ತಿನ ಸಮೀಕ್ಷೆ ನಡೆಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಧಾನಿ ಮೋದಿ ಭಾನುವಾರ ಆರೋಪಿಸಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕಿದೆ ಎಂಬ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್‌ ಆಡಳಿತದಲ್ಲಿ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ ಎಂದು ಪ್ರಧಾನಿ ಮೋದಿ ಅಲಿಘರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ತಾಯಂದಿರು ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕಹಾಕಿ ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುವುದಾಗಿ ಹೇಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Loksabha Election : ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್! ಯಾವ ಪಕ್ಷದ ಪರ ಇವರ ನಡೆ ?

ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಯಾರು ಎಷ್ಟು ಸಂಪಾದಿಸುತ್ತಾರೆ, ಯಾರು ಎಷ್ಟು ಆಸ್ತಿ ಹೊಂದಿದ್ದಾರೆಂದು ತನಿಖೆ ನಡೆಸುತ್ತೇವೆಂದು ಕಾಂಗ್ರೆಸ್‌ನ ಶೆಹಜಾದಾ ಹೇಳುತ್ತದೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ  ಇದು ʼಸ್ತ್ರೀ ಧನʼವೆಂದು ಪರಿಗಣಿಸಲಾಗಿದೆ. ಕಾನೂನು ಕೂಡ ಅದನ್ನು ರಕ್ಷಿಸುತ್ತದೆ. ಅವರ ಉದ್ದೇಶವು ತಾಯಂದಿರು ಮತ್ತು ಸಹೋದರಿಯರ ಚನ್ನವನ್ನು ಕದಿಯುವುದು ಅಂತಾ ಪ್ರಧಾನಿ ಮೋದಿ ಟೀಕಿಸಿದ್ದಾರೆ.

ನಿಮ್ಮ ಗ್ರಾಮದಲ್ಲಿ ಪೂರ್ವಿಕರ ಮನೆ ಇದ್ದರೆ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನಿಮ್ಮ ನಗರದಲ್ಲಿ ಒಂದು ಸಣ್ಣ ಫ್ಲ್ಯಾಟ್‌ ಖರೀದಿಸಿದರೆ, ಅವರು ಇವೆರಡರಲ್ಲಿ ಒಂದನ್ನು ಕಸಿದುಕೊಳ್ಳುತ್ತಾರೆ. ಇದು ಮಾವಾದಿ ಚಿಂತನೆ, ಇದು ಕಮ್ಯುನಿಸ್ಟರ ಚಿಂತನೆ. ಹೀಗೆ ಮಾಡುವುದರಿಂದ ಅವರು ಈಗಾಗಲೇ ಅನೇಕ ದೇಶಗಳನ್ನು ಹಾಳು ಮಾಡಿದ್ದಾರೆ. ಈಗ ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ಅದೇ ನೀತಿಯನ್ನು ಭಾರತದಲ್ಲಿ ಜಾರಿಗೆ ತರಲು ಬಯಸಿದೆ ಅಂತಾ ಪ್ರಧಾನಿ ಮೋದಿ ಕುಟುಕಿದ್ದಾರೆ.

ಇದನ್ನೂ ಓದಿ: ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಸೋದರ ಮಾವ ಸಾವು, ಸಹೋದರಿಗೆ ಗಂಭೀರ ಗಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News