Karnataka Weather: ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಮಳೆ..!

ರಾಜ್ಯದಲ್ಲಿ ಇಂದು ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಬೆಂಗಳೂರಿನ ಹಲವೆಡೆ ಬಾರಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು.  ಹಾಗೆ ಮಳೆಯ ಕಾರಣ ಇಂದು ಬಿಬಿಎಂಪಿ  ಜೆಸಿಬಿ ಘರ್ಜನೆಯನ್ನ ನಿಲ್ಲಿಸಿದೆ. 

Written by - Yashaswini V | Last Updated : Jun 20, 2023, 03:28 PM IST
  • ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಮಳೆ..!
  • ನಗರದಲ್ಲಿ ಮೋಡ ಕವಿದ ವಾತಾವರಣ‌..! ಮಳೆಯಲ್ಲಿ ವಾಹನ ಸವಾರರ ಪರದಾಟ..!
  • ಮುಂದಿನ ಒಂದು ವಾರದಲ್ಲಿ ಬಾರಿ ಮಳೆಯಾಗುವ ಮುನ್ಸೂಚನೆ..!.
Karnataka Weather: ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಮಳೆ..! title=

Rain Update: ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮುಂಜಾನೆ ಕೆಲವೆಡೆ ತುಂತುರು ಮಳೆ ಆಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಆರಂಭವಾಗಿದ್ದ ತುಂತುರು ಮಳೆಯಿಂದಾಗಿ ಜನ ಕೊಡೆ ಹಿಡಿದು, ಸ್ವೆಟ್ಟರ್ ಗಳನ್ನ ಧರಿಸಿ ಆಫೀಸ್, ಇತರೆ ಕೆಲಸಗಳಿಗೆ ತೆರಳುತ್ತಿದ್ದರು.

ಬೆಂಗಳೂರಿನ ರಾಜಾಜಿನಗರ, ಶಿವಾಜಿನಗರ, ಜಯನಗರ, ಮೆಜೆಸ್ಟಿಕ್, ವಿಧಾನಸೌಧ ಸೇರಿ ಹಲವೆಡೆ ಸುರಿದ ಧಾರಾಕಾರ ಮಳೆಗೆ ಕೆಲಕಾಲ ಜನ ಹೈರಾಣಾಗಿದ್ದರು. ಬಾರಿ ಮಳೆಯಿಂದಾಗಿ ಕಚೇರಿಗೆ ತೆರಳುವವರು ತೊಂದರೆ ಅನುಭವಿಸುವಂತಾಯಿತು. 

ಇದನ್ನೂ ಓದಿ- ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ತುಂತುರು ಮಳೆಯಾಗುತ್ತಿರುವ ಹಿನ್ನೆಲೆ ದಿನೇವಿಡಿ ಸೂರ್ಯ ಕೂಡ ಹೊರಬಂದಿಲ್ಲ.  ಕರ್ನಾಟಕದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದರಿಂದ ಬೆಂಗಳೂರಲ್ಲಿ ಇನ್ನು ಒಂದು ವಾರ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.  

ಮುಂದಿನ 48 ಗಂಟೆಗಳ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ : 
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ರಾಮನಗರ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋಮೀಟರ್ ಇರುವ ಸಾಧ್ಯತೆಯಿದೆ ಎನ್ನಲಾಗಿದೆ. 

ಇದನ್ನೂ ಓದಿ- ಪೊಲೀಸ್ ಇಲಾಖೆಗೆ ಸರ್ಜರಿ: ಸಂದೀಪ್ ಪಾಟೀಲ್, ರಮನ್ ಗುಪ್ತ ಸೇರಿ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಳೆಯಿಂದಾಗಿ ಬಿಬಿಎಂಪಿ  ಜೆಸಿಬಿ ಘರ್ಜನೆಯೂ ಸ್ಥಗಿತ: 
ಇನ್ನೂ ಭಾರಿ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಮಳೆ ಬಂತೆಂದರೆ ಹೊರಗೆ ಬರುವುದೇ ಕಷ್ಟ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಮಿಷನರ್ ಮಳೆಯಿಂದ ಎದುರಾಗುವ ಪರಿಸ್ಥಿತಿ  ಸರಿ ಮಾಡೊಕೆ ನಾವು ರೆಡಿ ಇದ್ದೇವೆ. ಹಾಗೆ ಮಳೆ ಇರುವ ಕಾರಣ ಒತ್ತುವರಿ ತೆರವು ಕಾರ್ಯಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News