ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿ ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡಿದೆ: ಕಾಂಗ್ರೆಸ್ ಆರೋಪ

ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Dec 27, 2023, 01:29 PM IST
  • ಬಿಜೆಪಿಗರು ಕರ್ನಾಟಕವನ್ನು ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿಸುವಂತೆ ಲೂಟಿ ಹೊಡೆದಿದ್ದಾರೆಯೇ?
  • ಬಿಜೆಪಿಯ ಒಳಜಗಳದಲ್ಲಿ ಬಿಜೆಪಿಗರ ಬಾಯಿಯಿಂದಲೇ ಅವೆಲ್ಲವೂ ಬಯಲಾಗುತ್ತಿದೆ
  • 40 ಸಾವಿರ ಕೋಟಿ ಯತ್ನಾಳ್ ಆರೋಪ ಸುಳ್ಳಾದರೆ ಬಿಜೆಪಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುವುದೇ?
ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿ ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡಿದೆ: ಕಾಂಗ್ರೆಸ್ ಆರೋಪ title=
ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿ ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪತ್ರಿಕಿಯಿಸಿದೆ.

ಯತ್ನಾಳ್ ಆರೋಪ ನೋಡಿದರೆ ಬಿಜೆಪಿಗರು ಕರ್ನಾಟಕವನ್ನು ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿಸುವಂತೆ ಲೂಟಿ ಹೊಡೆದಿದ್ದಾರೆಯೇ? ಬಿಜೆಪಿಯ ಒಳಜಗಳದಲ್ಲಿ ಬಿಜೆಪಿಗರ ಬಾಯಿಯಿಂದಲೇ ಅವೆಲ್ಲವೂ ಬಯಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ

‘ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? 40 ಸಾವಿರ ಕೋಟಿ ರೂಪಾಯಿಯ ಯತ್ನಾಳ್ ಆರೋಪ ಸುಳ್ಳು ಎಂದಾದರೆ ಬಿಜೆಪಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುವುದೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಅಣ್ಣ ನಾಡಕಳ್ಳ, ತಮ್ಮ ಕಾಡುಗಳ್ಳ!

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ಬೆಲೆಯ ಮರಗಳ್ಳತನ‌ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಹೆಸರು ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ: ರಾಜ್ಯದಲ್ಲಿ JN.1 ವೈರಸ್‌ನ ಆತಂಕ : ಸೋಂಕು ತಡೆಗೆ T3 ಸೂತ್ರ ಪಾಲಿಸೋದಕ್ಕೆ ಮುಂದಾದ ಆರೋಗ್ಯ ಇಲಾಖೆ

‘ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! ಹತ್ತಾರು ಎಕರೆಯಲ್ಲಿದ್ದ ಸಾವಿರಾರು ಮರಗಳನ್ನು ಮಾರಣ ಹೋಮ ಮಾಡಿ, ಕಳ್ಳಸಾಗಣೆಗೆ ಮುಂದಾಗಿದ್ದ ಪ್ರತಾಪ್ ಸಿಂಹನ ಸಹೋದರನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. ವೀರಪ್ಪನ್‍ನಿಂದ ತೆರವಾದ ಸ್ಥಾನಕ್ಕೆ ತಮ್ಮ ಸಹೋದರನನ್ನು ಪ್ರತಿಷ್ಠಾಪಿಸಲು ಮುಂದಾಗಿರುವಂತಿದೆ ಪ್ರತಾಪ್ ಸಿಂಹ! ಈ ಅಣ್ಣ ತಮ್ಮಂದಿರಿಂದ ನಾಡು, ಕಾಡು ಎರಡಕ್ಕೂ ಆಪತ್ತು ಅಲ್ಲವೇ’ ಎಂದು ಕಾಂಗ್ರೆಸ್ ವ್ಯಂಗ್ಯವಾಡದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News