T20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾವನ್ನು ಈ ಮ್ಯಾಚ್ ವಿನ್ನರ್ ಮುನ್ನಡೆಸಲಿ- ಗೌತಮ್ ಗಂಭೀರ್ ನಾಯಕನನ್ನಾಗಿ ಸೂಚಿಸಿದ್ದು ಯಾರನ್ನ?

T20 World Cup 2024, Rohit Sharma: 2024 ರ ಟಿ 20 ವಿಶ್ವಕಪ್‌’ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

Written by - Bhavishya Shetty | Last Updated : Nov 23, 2023, 09:29 PM IST
    • ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ
    • ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಮಹತ್ವದ ಹೇಳಿಕೆ
    • ಸ್ಪೋರ್ಟ್ಸ್‌ಕೀಡಾಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ
T20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾವನ್ನು ಈ ಮ್ಯಾಚ್ ವಿನ್ನರ್ ಮುನ್ನಡೆಸಲಿ- ಗೌತಮ್ ಗಂಭೀರ್ ನಾಯಕನನ್ನಾಗಿ ಸೂಚಿಸಿದ್ದು ಯಾರನ್ನ? title=
Gautam Gambhir

T20 World Cup 2024: ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆಸ್ಟ್ರೇಲಿಯಾ ವಿರುದ್ಧ 2023ರ ವಿಶ್ವಕಪ್ ಫೈನಲ್‌’ನಲ್ಲಿ ಸೋಲುಂಡ ಬಳಿಕ ಮುಂಬರುವ ದಿನಗಳಲ್ಲಿ ರೋಹಿತ್ ಶರ್ಮಾ ಏನಾದರೂ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದೇನೋ ಎಂಬ ಬಗ್ಗೆ ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಕಡೆಗಣಿಸಿದ್ರೇನಂತೆ… ಒಂದೇ ಪಂದ್ಯದಲ್ಲಿ 6 ವಿಕೆಟ್ ಕಿತ್ತು ಮಿಂಚಿದ ಯುಜ್ವೇಂದ್ರ ಚಹಾಲ್

2024 ರ ಟಿ 20 ವಿಶ್ವಕಪ್‌’ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಸ್ಪೋರ್ಟ್ಸ್‌ಕೀಡಾಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. “ರೋಹಿತ್ ಶರ್ಮಾ ಅವರು T20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬಹುದು. ಅವರಿಗೆ ಟೀಮ್ ಇಂಡಿಯಾ ನಾಯಕತ್ವದಲ್ಲಿ ಸಾಕಷ್ಟು ಅನುಭವವಿದೆ. 2023ರ ODI ವಿಶ್ವಕಪ್‌’ನಲ್ಲಿ ರೋಹಿತ್ ಶರ್ಮಾ ಇದರ ಟ್ರೈಲರ್ ಅನ್ನು ತೋರಿಸಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಭಾರತದ ಈ 3 ಆಟಗಾರರು: ಯಾರವರು ಗೊತ್ತಾ?

ಟಿ20 ವಿಶ್ವಕಪ್‌’ಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರನ್ನೂ ಆಯ್ಕೆ ಮಾಡಬೇಕು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. 2024 ರ ಟಿ20 ವಿಶ್ವಕಪ್‌’ನಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕತ್ವವನ್ನು ನೋಡಲು ನಾನು ಬಯಸುತ್ತೇನೆ. ರೋಹಿತ್ ಶರ್ಮಾ ಶ್ರೇಷ್ಠ ನಾಯಕರಾಗಿದ್ದು, ಈ ವಿಶ್ವಕಪ್‌’ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಅದನ್ನು ತೋರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಟಿ20ಯಲ್ಲಿ ನಾಯಕತ್ವ ವಹಿಸಿದ್ದರೂ, ಟಿ20 ವಿಶ್ವಕಪ್ 2024ರಂತಹ ದೊಡ್ಡ ಟೂರ್ನಿಯಲ್ಲಿ ರೋಹಿತ್ ಶರ್ಮಾಗೆ ನಾಯಕನಾಗಿ ಅವಕಾಶ ನೀಡಲು ನಾನು ಬಯಸುತ್ತೇನೆ” ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News