BS Yediyurappa : ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ. ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ ಶ್ರೀಗಳು ಅದನ್ನು ಕ್ಷಮಿಸಬೇಕು ಎಂದು ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
BS Yediyurappa: ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಬಿಜೆಪಿ ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುತೇಕ ನಾಳೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ಹೇಳಿದರು.
ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
ಬಿಜೆಪಿಯಲ್ಲಿ ಮುಂದುವರೆದ ಬಳ್ಳಾರಿ ಲೋಕಸಭಾ ಟಿಕೆಟ್ ಫೈಟ್
ಯಡಿಯೂರಪ್ಪ ಭೇಟಿ ಮಾಡಿದ ಮಾಜಿ ಶಾಸಕ ಸೋಮಲಿಂಗಪ್ಪ..!
ಟಿಕೆಟ್ ಕೊಡಿಸುವಂತೆ ಯಡಿಯೂರಪ್ಪಗೆ ಸೋಮಲಿಂಗಪ್ಪ ಮನವಿ
ನನಗೆ ಬಿಜೆಪಿ ಟಿಕೆಟ್ ನೀಡಿದ್ರೆ ಜಿಲ್ಲೆಯನ್ನು ಅಭಿವೃದ್ಧಿ ಮಾಡುತ್ತೇನೆ
ಬಿಜೆಪಿಯವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Congress guarantee schemes: ಸಿಎಂ ಸಿದ್ದರಾಮಯ್ಯರ ವಿರುದ್ಧ ಟೀಕೆ ಮಾಡುವ ಮೊದಲು ಬಿ.ಎಸ್.ಯಡಿಯೂರಪ್ಪನವರು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ ಎಂದು ಎಂ.ಬಿ.ಪಾಟೀಲ್ ಖಾರವಾಗಿ ಟೀಕಿಸಿದ್ದಾರೆ.
Ayodhya Ram Lalla's idol: ‘ಎಲ್ಲಿ ರಾಮನೋ ಅಲ್ಲಿ ಹನುಮನು’ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, 40 ಸಾವಿರ ಕೋಟಿಯಲ್ಲಿ ಬಿಜೆಪಿಯ ದೆಹಲಿ ನಾಯಕರಿಗೆ ಪಾಲೆಷ್ಟು?, ರಾಜ್ಯದ ನಾಯಕರ ಪಾಲೆಷ್ಟು?, ಹೆಣದಿಂದ ಸಂಪಾದಿಸಿದ ಈ ಪಾಪದ ಹಣದಿಂದ ಮಾಲ್ಡಿವ್ಸ್ನಲ್ಲಿ ತಾವು ಹೂಡಿಕೆ ಮಾಡಿದ್ದೆಷ್ಟು? ಅಮೆರಿಕದಲ್ಲಿ ಖರೀದಿಸಿದ ಮನೆಗಳೆಷ್ಟು? ಫಾರ್ಮ್ ಲ್ಯಾಂಡ್ಗಳೆಷ್ಟು? ಮತ್ತು ದುಬೈನಲ್ಲಿ ಮಾಡಿದ ಆಸ್ತಿಗಳೆಷ್ಟು? ಮಾತಾಡಿ ವಿಜಯೇಂದ್ರ ಮಾತಾಡಿ! ಎಂದು ಕಾಂಗ್ರೆಸ್ ಟೀಕಿಸಿದೆ.
Rs 40,000 crore Covid scam: ಸ್ವಪಕ್ಷದವರಿಂದಲೇ ಬಿಜೆಪಿಯ 40 ಸಾವಿರ ಕೋಟಿಯ ಕೋವಿಡ್ ಹಗರಣವನ್ನು ಬಹಿರಂಗಪಡಿಸಿದರೂ "ನಾ ಖವುಂಗಾ ನಾ ಖಾನೆದುಂಗ" ಎಂದು ಭಾಷಣ ಬಿಗಿಯುವ ಪ್ರಧಾನಿ ಮೋದಿಯವರು "ಕೈ ಕಟ್ ಬಾಯ್ ಮುಚ್" ಎನ್ನುವಂತೆ ಸುಮ್ಮನಿರುವುದೇಕೆ? ಐಟಿ, ಇಡಿ, ಸಿಬಿಐ ಮುಂತಾದ ತನಿಖಾ ಸಂಸ್ಥೆಗಳು ಎಲ್ಲಿ ಹೋದವು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Rs 40,000 crore Covid scam: ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟವೆಂದು ಕಾಂಗ್ರೆಸ್ ಟೀಕಿಸಿದೆ.
ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Rs 40000 crore scam during covid 19: ನಾನು ಪ್ರಧಾನಿ ಮೋದಿಯವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP vs BJP: ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ. ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಬಿಜೆಪಿ? ಎಂದು ಕಾಂಗ್ರೆಸ್ ಟೀಕಿಸಿದೆ.
ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka BJP Unit Reshuffle: ಬಿಜೆಪಿಯಲ್ಲಿನ ರಾಜಕಾರಣ ಪ್ರೊ ಕಬ್ಬಡ್ಡಿ ಆಟದಂತೆ. ಸಂತೋಷ ಕೂಟ vs BSY ಕೂಟದ ನಡುವಿನ ಆಟದಲ್ಲಿ ಒಮ್ಮೊಮ್ಮೆ ಸಂತೋಷ ಕೂಟದ ಆಟ ಮೇಲುಗೈ ಸಾಧಿಸಿದರೆ, ಮತ್ತೊಮ್ಮೆ BSY ಕೂಟದ ಮೇಲುಗೈ! ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.