ಮಾರ್ಚ್ 18 ರಿಂದ ಯುರೋಪಿಯನ್ ಒಕ್ಕೂಟ, ಯುಕೆ ಮತ್ತು ಟರ್ಕಿಯಿಂದ ಪ್ರಯಾಣಿಕರ ಪ್ರಯಾಣವನ್ನು ನಿಷೇಧಿಸುವ ಕೇಂದ್ರದ ಸುತ್ತೋಲೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಶುಕ್ರವಾರ (ಮಾರ್ಚ್ 20) ಆರೋಗ್ಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯಗಳು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗೆ ನೋಟಿಸ್ ಜಾರಿಗೊಳಿಸಿದೆ.
1984 ರಂತಹ ಮತ್ತೊಂದು ಘಟನೆಯನ್ನು ನಾವು ಈ ದೇಶದಲ್ಲಿ ನಡೆಯಲು ಬಿಡುವುದಿಲ್ಲ ಎಂದು ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಹೇಳಿದ್ದಾರೆ. ಇಂದು ಸತತ ನಾಲ್ಕನೇ ದಿನ ದೆಹಲಿಯ ವಿವಿಧ ಭಾಗಗಳಲ್ಲಿ ನಡೆದ ಹಿಂಸಾಚಾರದ ವಿಚಾರವಾಗಿ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿದ್ದಾರೆ.
ನಿರ್ಭಯಾ ಪ್ರಕರಣದ ಆರೋಪಿಗಳು ತಮ್ಮ ಎಲ್ಲಾ ಕಾನೂನು ಪರಿಹಾರಗಳನ್ನು ಚಲಾಯಿಸಲು ಒಂದು ವಾರ ಕಾಲಾವಕಾಶ ಪಡೆಯಲಿದ್ದು, ನಂತರ ಅವರ ಮರಣದಂಡನೆ ವಿಚಾರಣೆಯನ್ನುನ್ಯಾಯಾಲಯವು ಪ್ರಾರಂಭಿಸಲಿದೆ ಎಂದು ದೆಹಲಿ ಹೈಕೋರ್ಟ್ ಇಂದು ತಿಳಿಸಿದೆ. ಆದಾಗ್ಯೂ, ನ್ಯಾಯಾಲಯ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಕೋರಿದ ಕೇಂದ್ರದ ಕೋರಿಕೆಯನ್ನು ನಿರಾಕರಿಸಿತು.
ನಿರ್ಭಯಾ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರಲ್ಲಿ ಕನಿಷ್ಠ ಇಬ್ಬರನ್ನು ಗಲ್ಲಿಗೇರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಿರ್ಧರಿಸಲು ದೆಹಲಿ ಹೈಕೋರ್ಟ್ ಭಾನುವಾರ ಮಧ್ಯಾಹ್ನ ವಿಶೇಷ ವಿಚಾರಣೆ ನಡೆಸಲಿದೆ. ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಧೀಶರಿಗೆ ತಮ್ಮ ವಿಳಂಬ ತಂತ್ರಗಳಿಂದ ಅಪರಾಧಿಗಳು ದೇಶದ ತಾಳ್ಮೆಯನ್ನು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿನ ಧನ ಸಹಾಯದಿಂದ ಹೊರಬರುವುದು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ವಿವಿ ಶುಲ್ಕ ಹೆಚ್ಚಳದ ವಿಚಾರವಾಗಿ ಕೇಂದ್ರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಜೆಎನ್ಯು ವಿವಿ ಹಾಸ್ಟೆಲ್ ಶುಲ್ಕ ಹೆಚ್ಚಳ ವಿರುದ್ಧ ಜೆಎನ್ಯುಎಸ್ಯು ಮಂಗಳವಾರ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದೆ. ಜೆಎನ್ಯುಎಸ್ಯು ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇತರ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯಲ್ಲಿ, ಹಳೆಯ ಶುಲ್ಕ ರಚನೆಯ ಪ್ರಕಾರ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅವಕಾಶ ನೀಡುವಂತೆ ನ್ಯಾಯಾಲಯವು ಆಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.
ತಿಹಾರ್ ಜೈಲಿನ ಅಧಿಕಾರಿಗಳು ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಪಾಲಿಸಿಥೆಮಿಯಾದಿಂದ ಬಳಲುತ್ತಿದ್ದಾರೆ ಎಂದು ತಿಳಿದ ನಂತರವೂ ಸಾಮಾನ್ಯ ಔಷಧಿಗಳನ್ನು ನೀಡುತ್ತಲೇ ಇದ್ದರು, ಇದು ಅಪರೂಪದ ರಕ್ತ ಕಾಯಿಲೆಯಾಗಿದ್ದು, ದೇಹವು ಹಲವಾರು ಕೆಂಪು ರಕ್ತ ಕಣಗಳನ್ನು ಸೃಷ್ಟಿಸುತ್ತದೆ ಎಂದು ದೆಹಲಿ ನ್ಯಾಯಾಲಯವು ಹೇಳಿದೆ.
ಘಟನೆಯನ್ನು ತಡೆಯಲು ತಜ್ಞರ ಸಮೀತಿ ರಚನೆಯಾಗಬೇಕು ಮತ್ತು ಈ ಸಮೀತಿ ಸಂಪೂರ್ಣ ದೆಹಲಿಯಲ್ಲಿ ಸರ್ವೇ ನಡೆಸಿ, ಈ ಘಟನೆಯ ಹಿನ್ನೆಲೆ ಇಂತಹ ಎಷ್ಟು ಸೂಕ್ಷ್ಮ ಕಟ್ಟಡಗಳಿವೆ ಎಂಬುದನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ಮನಿ ಲಾಂಡರಿಂಗ್ ಪ್ರಕರಣದ ವಿಚಾರವಾಗಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ದೆಹಲಿ ಹೈಕೋರ್ಟ್ ಈಗ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.
ದಸರಾ ಹಬ್ಬದ ಕಾರಣದಿಂದಾಗಿ ಮುಂದೂಡಲಾಗಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಆದರೆ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮತ್ತೆ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಇಂದ್ರಾಣಿ ಮುಖರ್ಜಿರನ್ನು ಎಂದಿಗೂ ಯಾವುದೇ ಸ್ಥಳದಲ್ಲಿ ಭೇಟಿಯಾಗಲಿಲ್ಲ ಎಂದು ಐಎನ್ಎಕ್ಸ್ ಮಾಧ್ಯಮ ಪ್ರಕರಣದ ಆರೋಪಿ ಪಿ ಚಿದಂಬರಂ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬುಧವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಯುಪಿಎ ಮಾಜಿ ಸಚಿವ ಪಿ. ಚಿದಂಬರಂ ಅವರ ಜಾಮೀನನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಜಡ್ಜ್ ಸುನಿಲ್ ಗೌರ್ ಪಿಎಂಎಲ್ಎನ್ ಟ್ರಿಬ್ಯೂನಲ್ ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.