ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ ಎಂದರು.
LPG Cylinder Price: ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಪಿಜಿ ಸಿಲಿಂಡರ್ ದರ 2,000ರೂ.ಗೆ ಏರಿಕೆಯಾಗಬಹುದು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದದ್ದೀರಿ. ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ರಾಜ್ಯದ 27 ಲೋಕಸಭಾ ಕ್ಷೇತ್ರಗಳದ್ದು ಒಂದೊಂದು ರೀತಿಯ ರಾಜಕಾರಣವಾದರೆ ಮಂಡ್ಯ ಕ್ಷೇತ್ರದ ರಾಜಕಾರಣ ಕಳೆದ ಚುನಾವಣೆಯಿಂದ ಬೇರೆ ರೂಪವನ್ನೇ ಪಡೆದುಕೊಂಡಿದೆ. ಸಂಸದರಾಗಿ 5 ವರ್ಷ ಪೂರೈಕೆ ಹಿನ್ನೆಲೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಸಂಸದೆ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಸಂಬಂಧ ಬೆಂಬಲಿಗರೊಂದಿಗೆ ಸಭೆ ಮಾಡಿದ್ದಾರೆ.
ಸೀಟು ಹಂಚಿಕೆ ಬಗ್ಗೆ JDS-BJP ನಡುವೆ ಯಾವುದೇ ಗೊಂದಲ ಇಲ್ಲ
ರಾಜ್ಯದ 28 ಕ್ಷೇತ್ರಗಳನ್ನ ಗೆಲ್ಲಬೇಕು ಎನ್ನುವುದೇ ನಮ್ಮ ಗುರಿ
ಕೆಂಪೇಗೌಡ ಏರ್ಪೋರ್ಟ್ನಲ್ಲಿ H.D.ಕುಮಾರಸ್ವಾಮಿ ಹೇಳಿಕೆ
ಶೀಘ್ರ ಸೀಟು ಹಂಚಿಕೆ ಗೊಂದಲ ನಿವಾರಣೆ- ನಿಖಿಲ್ ಕುಮಾರಸ್ವಾಮಿ
ರಾಷ್ಟ್ರನಾಯಕರು ಹಾಗೂ HDK-HDD ತೀರ್ಮಾನಿಸುತ್ತಾರೆ- ನಿಖಿಲ್
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.
ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ಬಿಜೆಪಿಯವರು ಕಾಂಗ್ರೆಸ್ ನಾಯಕರ ಖಾತೆಗಳನ್ನು ಸೀಜ್ ಮಾಡಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ಅಬ್ಬಯ್ಯಾ ಪ್ರಸಾದ್, ಇವರಿಗೆಲ್ಲ ಯಾವಾಗ ಯಾವಾಗ ಚುನಾವಣೆ ಬರುತ್ತದೆಯೋ, ಅಂತಹ ಸಂದರ್ಭದಲ್ಲಿ ಕೀಳು ಮಟ್ಟದ ರಾಜಕೀಯ ಮಾಡುತ್ತಾರೆ. ಇವರ 9 ವರ್ಷಗಳ ಅಧಿಕಾರಾವಧಿಯಲ್ಲಿ ಇದನ್ನು ಎಲ್ಲರೂ ಗಮನಿಸಿದ್ದೀರಿ ಎಂದು ಹೇಳಿದರು.
Lok Sabha Election 2024: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಕೂಡ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಮಲನಾಥ್ ಹಾಗೂ ಅವರ ಪುತ್ರ ಕೂಡ ಕಾಂಗ್ರೆಸ್ ಗೆ ವಿದಾಯ ಹೇಳುತ್ತಿದ್ದಾರೆ. ಇಂಡಿಯಾ ಒಕ್ಕೂಟ ಛಿದ್ರವಾಗಿದೆ. ಹೀಗಾಗಿ ಬಿಜೆಪಿ 370ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಳಿವಿನಂಚಿನಲ್ಲಿದೆ, ಹೀಗಾಗಿ ಗಿಮಿಕ್ ಮಾಡ್ತಿದ್ದಾರೆ ಎಂದು ಆರೋಪಿಸಿದರರಲ್ಲದೆ, ಮನೆಗೆ ನೀರು ಬರದಿದ್ದರೂ ಮೋದಿ ಮೇಲೆ ಹಾಕ್ತಾರೆ. ಒಂದೇ ಸಮುದಾಯಕ್ಕೆ ಹತ್ತು ಸಾವಿರ ಕೊಡ್ತೇನೆ ಅಂತಾರೆ. ದೇಶ ಒಡೆಯುವ ಕೆಲಸ ಮಾಡ್ತಿದ್ದಾರೆ- ಕೋಲಾರ ಸಂಸದ ಎಸ್.ಮುನಿಸ್ವಾಮಿ
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.