2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಸಚಿವ ಎಂ ಬಿ ಪಾಟೀಲ

ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. 

Written by - Yashaswini V | Last Updated : Mar 4, 2024, 12:33 PM IST
  • ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದೆ
  • ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ.
  • ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ- ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಸಚಿವ ಎಂ ಬಿ ಪಾಟೀಲ title=

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಇದನ್ನೂ ಓದಿ- Anant Ambani Net Worth : ಶೀಘ್ರದಲ್ಲಿಯೇ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಅನಂತ್ ಅಂಬಾನಿ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ ?

ಇಂದು(ಮಾರ್ಚ್ 04) ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ ಎಂದು ತಿಳಿಸಿದರು.

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ. ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು ಎಂದು ಅವರು ನುಡಿದರು.

ಇದನ್ನೂ ಓದಿ- Aadhaar History: ಪ್ರತಿಯೊಬ್ಬರೂ ಆಧಾರ್ ಇತಿಹಾಸವನ್ನು ನೋಡಿ ತಿಳಿಯಲೇಬೇಕು..! ಏಕೆಂದರೆ

ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ. ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿದೆ ಎಂದು ಪಾಟೀಲ ವಿವರಿಸಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ  ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News