Priyanka Gandhi: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು: ಆಸ್ಪತ್ರೆಗೆ ದಾಖಲು

Priyanka Gandhi Vadra Admitted To Hospital: ಭಾರತ್ ಜೋಡೋ ನ್ಯಾಯ ಯಾತ್ರೆ ಉತ್ತರ ಪ್ರದೇಶ ತಲುಪಲು ನಾನು ಕಾತರದಿಂದ ಕಾಯುತ್ತಿದ್ದೆ, ಆದರೆ ಅನಾರೋಗ್ಯದ ಕಾರಣ ಇಂದೇ ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Written by - Bhavishya Shetty | Last Updated : Feb 16, 2024, 05:07 PM IST
    • ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಗ್ಯದಲ್ಲಿ ಏರುಪೇರು
    • ಅನಾರೋಗ್ಯದ ಕಾರಣ ಪ್ರಿಯಾಂಕಾ ಗಾಂಧಿ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿಲ್ಲ
    • ಗುಣಮುಖರಾದ ನಂತರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಮಾಹಿತಿ
Priyanka Gandhi: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು: ಆಸ್ಪತ್ರೆಗೆ ದಾಖಲು title=
Priyanka Gandhi

Priyanka Gandhi hospitalized: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯದ ಕಾರಣ ಪ್ರಿಯಾಂಕಾ ಗಾಂಧಿ ಅವರು ಇಂದು (ಫೆಬ್ರವರಿ 16) ಉತ್ತರ ಪ್ರದೇಶದ ಚಂದೌಲಿಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಪ್ರಿಯಾಂಕಾ ಗಾಂಧಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರು ಗುಣಮುಖರಾದ ನಂತರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಟ್ವಿಟರ್‌ ಮೂಲಕ ತಿಳಿಸಲಾಗಿದೆ.

ಇದನ್ನೂ ಓದಿ: ನಯನತಾರಾ ಸಹೋದರನನ್ನು ನೋಡಿದ್ದೀರಾ? ಇಲ್ಲಿದೆ ನೋಡಿ ಅಣ್ಣ ತಂಗಿಯ ಅಪರೂಪದ ಪೋಟೋ!

ಭಾರತ್ ಜೋಡೋ ನ್ಯಾಯ ಯಾತ್ರೆ ಉತ್ತರ ಪ್ರದೇಶ ತಲುಪಲು ನಾನು ಕಾತರದಿಂದ ಕಾಯುತ್ತಿದ್ದೆ, ಆದರೆ ಅನಾರೋಗ್ಯದ ಕಾರಣ ಇಂದೇ ಆಸ್ಪತ್ರೆಗೆ ದಾಖಲಾಗಬೇಕಾಯಿತು” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

“ನಾನು ಗುಣಮುಖರಾದ ಬೆನ್ನಲ್ಲೇ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ. ಅಲ್ಲಿಯವರೆಗೆ, ಚಂದೌಲಿ-ಬನಾರಸ್ ತಲುಪುವ ಎಲ್ಲಾ ಪ್ರಯಾಣಿಕರು, ನನ್ನ ಸಹೋದ್ಯೋಗಿಗಳು ಮತ್ತು ಉತ್ತರ ಪ್ರದೇಶದ ಪ್ರೀತಿಯ ಸಹೋದರ ಪ್ರಯಾಣಕ್ಕಾಗಿ ಶ್ರದ್ಧೆಯಿಂದ ತಯಾರಿ ನಡೆಸಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ವಾರಣಾಸಿ ಮೂಲಕ ಯುಪಿ ಪ್ರವೇಶಿಸಿ ನಂತರ ಭಾದೋಹಿ, ಪ್ರಯಾಗ್‌ ರಾಜ್ ಮತ್ತು ಪ್ರತಾಪ್‌ಗಢ ಮೂಲಕ ಫೆಬ್ರವರಿ 19 ರಂದು ಅಮೇಥಿ ತಲುಪಲಿದೆ, ಫೆಬ್ರವರಿ 19 ರಂದು ಅಮೇಥಿ ಲೋಕಸಭಾ ಕ್ಷೇತ್ರದ ಗೌರಿಗಂಜ್‌’ನಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಯಾತ್ರೆಯು ಮರುದಿನ ರಾಯ್ ಬರೇಲಿ ತಲುಪಲಿದ್ದು ಅಲ್ಲಿಂದ ಲಕ್ನೋಗೆ ತೆರಳಲಿದೆ.

ಇದನ್ನೂ ಓದಿ: ಬಜೆಟ್‌ನಲ್ಲಿ ಬಯಲುಸೀಮೆಗೆ ವಂಚನೆಯಾಗಿದೆ, ಯಾವುದೇ ಯೋಜನೆ ಇಲ್ಲ..! 

ರಾಯ್ ಬರೇಲಿ ಯುಪಿಯಲ್ಲಿ ಕಾಂಗ್ರೆಸ್ ವಶದಲ್ಲಿರುವ ಏಕೈಕ ಲೋಕಸಭಾ ಕ್ಷೇತ್ರವಾಗಿದೆ. ಸದ್ಯ ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News