Lok Sabha Election 2024: "ರಾಜ್ಯಕ್ಕೆ ಆದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ"

ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Manjunath Naragund | Last Updated : Apr 25, 2024, 04:10 PM IST
  • ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ
  • ಕೇಂದ್ರ ಸಚಿವ ಜೋಷಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ
  • ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಎಂದು ಹೇಳಿದರು
 Lok Sabha Election 2024: "ರಾಜ್ಯಕ್ಕೆ ಆದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ" title=

ಶಿಗ್ಗಾಂವಿ: ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ಒಬಿಸಿ, ದಲಿತರಿಗೆ ಅನ್ಯಾಯ: ಕಾಂಗ್ರೆಸ್ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಆರೋಪ

ಅವರು ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ.ಕೇಂದ್ರ ಸಚಿವ ಜೋಷಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ.ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ 

ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಅಸೂಟಿಯವರು ಈ ಬಾರಿ ಗೆದ್ದೇ ಗೆಲ್ಲುತ್ತಾರೆ.ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಅವರು ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News