ಎಸ್‌ಎಸ್‌ಎಲ್‌ಸಿ ಟಾಪರ್‌ ಬಾಗಲಕೋಟೆ ಅಂಕಿತಾಗೆ ಶುಭಕೋರಿದ ರಿಷಬ್ ಶೆಟ್ಟಿ

SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. 

Written by - Zee Kannada News Desk | Last Updated : May 9, 2024, 09:58 PM IST
  • ಮುಧೋಳದ ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ.
  • ಧ್ರುವ ಸರ್ಜಾ, ರಿಷಬ್ ಶೆಟ್ಟಿ ಪೋಸ್ಟ್ ಹಾಕಿಕೊಂಡಿದ್ದಾರೆ
  • ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು 8.59,967 ಲಕ್ಷ ವಿಧ್ಯಾರ್ಥಿಗಳು. ಈ ಪೈಕಿ 6,31,204 ತೇರ್ಗಡೆಯಾಗಿದ್ದಾರೆ.
ಎಸ್‌ಎಸ್‌ಎಲ್‌ಸಿ ಟಾಪರ್‌ ಬಾಗಲಕೋಟೆ ಅಂಕಿತಾಗೆ ಶುಭಕೋರಿದ ರಿಷಬ್ ಶೆಟ್ಟಿ title=

Rishabh Shetty wishes to SSLC topper : SSLC ಫಲಿತಾಂಶ ಇಂದು ಪ್ರಕಟವಾಗಿದೆ.  8.69 ಲಕ್ಷ ವಿದ್ಯಾರ್ಥಿಗಳ ನಿರೀಕ್ಷೆಗೆ ತೆರೆ ಬಿದ್ದಿದೆ. ಈ ಬಾರಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಈ ಬಾರಿ ಪರೀಕ್ಷೆ ಬರೆದಿದ್ದರು.  kseeb.kar.nic.in ಮತ್ತು karresults.nic.in  ಅನ್ನು ಲಾಗಿ ಇನ್ ಆಗುವ ಮೂಲಕ ರಿಸಲ್ಟ್ ತಿಳಿದುಕೊಳ್ಳುವ ಅವಕಾಶವಿತ್ತು. 

ಇದನ್ನು ಓದಿ : ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!
 
ಮಾರ್ಚ್ 25 ರಿಂದ ಆರಂಭವಾಗಿದ್ದ ಈ ಬಾರಿಯ ಪರೀಕ್ಷೆ ಆಗಸ್ಟ್ 6 ರವರೆಗೆ ನಡೆದಿತ್ತು. ಬಳಿಕ ಏಪ್ರಿಲ್ 15 ರಂದು SSLC ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿತ್ತು. ಇಂದು ಬೆಳಿಗ್ಗೆ 10.30 ಕ್ಕೆ ರಾಜ್ಯದ 8.69 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದೆ.  ರಾಜ್ಯದಲ್ಲಿ ಒಟ್ಟು ವಿದ್ಯಾರ್ಥಿಗಳು 28,74,16 ಉತ್ತೀರ್ಣರಾಗಿದ್ದಾರೆ. ಈ ಮೂಲಕ ಒಟ್ಟು  65.90 ಶೇಕಡವಾರು ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಶೇಕಡ 10% ಕುಸಿತ ದಾಖಲಾಗಿದೆ. 

 
 
 
 

 
 
 
 
 
 
 
 
 
 
 

A post shared by Rishab Shetty (@rishabshettyofficial)

ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು 8.59,967 ಲಕ್ಷ ವಿಧ್ಯಾರ್ಥಿಗಳು. ಈ ಪೈಕಿ 6,31,204 ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ ನೋಡುವುದಾದರೆ  ಬಾಲಕರು:2,87,416 (65.90%) ಬಾಲಕಿಯರು :3,43,788 (81.11%) ಸಾಧಿಸಿದ್ದಾರೆ.  ಉತ್ತರ ಪತ್ರಿಕೆ ಪಡೆಯಲು ಮೇ 14 ರವರೆಗೆ ಅವಕಾಶವಿದೆ. 13ನೇ ತಾರೀಕಿನಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ಮುಧೋಳದ ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ರಾಜ್ಯದಲ್ಲಿ ಮೇದಾ ಪಿ ಶೆಟ್ಟಿ ( ಬೆಂಗಳೂರು), ಹರ್ಷಿತಾ ಡಿಎಂ (ಮಧುಗಿರಿ), ಚಿನ್ಮಯ್ (ದಕ್ಷಿಣ ಕನ್ನಡ), ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ (ಶಿರಸಿ),  ಚಿನ್ಮಯ್ (ಶಿರಸಿ), ಶ್ರೀರಾಮ್ (ಶಿರಸಿ) 7 ಜನರಿಗೆ ದ್ವೀತಿಯ ಸ್ಥಾನ ಪಡೆದಿದ್ದಾರೆ. 

ಇದನ್ನು ಓದಿ : ಮೇ14 ರಿಂದ 25ರವರೆಗೆ ನಡೆಯುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲಿರುವ ಈ ಬಾಲಿವುಡ್ ನಟಿಯರು

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ  ಅಂಕಿತಾ ಬಸಪ್ಪ ಕೊಣ್ಣೂರ ಅವರಿಗೆ ಚಿತ್ರರಂಗ ನಟ-ನಟಿಯರು ಶುಭಕೋರಿದ್ದು, ಧ್ರುವ ಸರ್ಜಾ, ರಿಷಬ್ ಶೆಟ್ಟಿ ಪೋಸ್ಟ್ ಹಾಕಿಕೊಂಡಿದ್ದಾರೆ. #SSLC ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮತ್ತು ಅವರ ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳು.ಈ ಸಾಧನೆ ಹಲವಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು ಎಂದು ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ದಲ್ಲಿ ಪೋಸ್ಟ್ ಹಾಕಿಕೊಂಡು ಬರೆದುಕೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News