Karnataka Assembly Election: ಜಿಲ್ಲೆಯಲ್ಲಿ 195 ಮಂದಿ ಸೇವಾ ಮತದಾರರು ಇದ್ದು 97 ಸೆಕ್ಟರ್ ಅಧಿಕಾರಿಗಳು, 12 ಪ್ಲೈಯಿಂಗ್ ಸ್ಕ್ವಾಡ್ ತಂಡ,16 ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ, ಮಾದರಿ ನೀತಿ ಸಂಹಿತೆ ಪಾಲನೆ ಮೇಲೆ ನಿಗಾ ಇಡುವ ಉದ್ದೇಶದಿಂದ 37 ಮಂದಿ ಇರಲಿದ್ದಾರೆ.
ಜಿಲ್ಲಾಧಿಕಾರಿಯವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಎಂಬಾತ ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ತನ್ನ ಮತ್ತು ಇತರರ ಖಾತೆಗೆ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.
ಪತ್ರಕರ್ತನ ಸಮಯಪ್ರಜ್ಞೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಮರಿಯಾನೆಯೊಂದು ತಾಯಿ ಮಡಿಲು ಸೇರಿದ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಪಾಲಾರ್ ಅರಣ್ಯ ಪ್ರದೇಶದ ಬೀಟ್ ನಲ್ಲಿ ಗುರುವಾರ ನಡೆದಿದೆ.
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದೆ. ಎಲೆಕ್ಷನ್ ಬಂತೆಂದರೆ ಎಣ್ಣೆ ಹಂಚೋದು ಮಾಮೂಲಿ. ಅಕ್ರಮ ಮದ್ಯ ಹಂಚಿಕೆ ಆಗಬಾರದೆಂದು ಈಗಿನಿಂದಲೇ ಅಬಕಾರಿ ಇಲಾಖೆ ಅಲರ್ಟ್ ಆಗಿದೆ. ಕಳೆದ ಒಂದು ತಿಂಗಳಿನಲ್ಲಿ 115 ದಾಳಿ ನಡೆಸಿ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳೆದ ಫೆ. 19ರಿಂದ ಮಾರ್ಚ್ 20ರವರೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯು ಒಟ್ಟು 115 ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.
ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ದಲಿತ ರಾಜಕಾರಣಿಗಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿಕೊಂಡರು.
Chamarajanagar : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪ್ರಾಪ್ತ ಬಾಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ರಥಯಾತ್ರೆಗೆ ಚಾಲನೆ ಸಿಕ್ಕಿದೆ.. ಬಿಜೆಪಿಯ ರಥಯಾತ್ರೆಗೆ ಜೆ.ಪಿ.ನಡ್ಡಾರಿಂದ ಗ್ರೀನ್ಸಿಗ್ನಲ್ ನೀಡಿದ್ದಾರೆ.. ರಥಯಾತ್ರೆಯಿಂದ ಸಚಿವ ಸೋಮಣ್ಣ ದೂರ ಉಳಿದಿದ್ದಾರೆ.. ಇದು ಅಸಮಾಧಾನದಿಂದ ಸಚಿವ ಸೋಮಣ್ಣ ರಥಯಾತ್ರೆ ಗೈರಾದ್ರಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ..
ಚಾಮರಾಜನಗರ ಜಿಲ್ಲೆಯಲ್ಲಿ ಬಹುಪಾಲು ಮಂದಿ ರೈತರು ಬಾಳೆ, ಅರಿಶಿಣ ಹಾಗೂ ಟೊಮ್ಯಾಟೊ, ಸಣ್ಣ ಈರುಳ್ಳಿಯನ್ನು ಬೆಳೆಯಲಿದ್ದು ತಮಿಳುನಾಡು ಮತ್ತು ಮೈಸೂರು ಉತ್ತಮ ಮಾರುಕಟ್ಟೆಗಳಾಗಿದೆ. ಹಾಗಾಗಿಯೇ ಅರಿಶಿಣಪುಡಿ ತಯಾರಿಕಾ ಘಟಕ ಮತ್ತು ಟೊಮೆಟೊ, ಬಾಳೆ ಸಂಸ್ಕರಣ ಘಟಕವನ್ನು ಸ್ಥಾಪಿಸಬೇಕೆಂದು ಇಲ್ಲಿನ ಜನರ ಬಹುವರ್ಷಗಳ ಬೇಡಿಕೆ.
ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ಯುವಕ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿನ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ.
Darshan visits Male Mahadeshwara Hill : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹುಲಿಯ ಕಾಲಿಗೆ ತಂತಿಯಿಂದ ಕಲ್ಲು ಕಟ್ಟಿ ಕೆರೆಗೆ ಎಸೆದಿರುವುದು ಮೇಲ್ನೋಟಕ್ಕೆ ಖಚಿತವಾಗಿದ್ದು ಬೇರೆ ಸ್ಥಳದಲ್ಲಿ ಮೃತಪಟ್ಟಿರುವ ಹುಲಿಯನ್ನು ಕೆರೆಗೆ ತಂದು ಬಿಸಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.