'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.
ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.
ಮಾಟಮಂತ್ರದ ಯಾಗದಲ್ಲಿ ಕೆಲವು ಅಘೋರಿಗಳು ಭಾಗಿಯಾದ್ದಾರೆ, ಈ ಮಾಟಮಂತ್ರಕ್ಕಾಗಿ 21 ಕೆಂಪು ಮೇಕೆ, ಮೂರು ಎಮ್ಮೆ, 21 ಕಪ್ಪು ಕುರಿ, ಐದು ಹಂದಿಗಳನ್ನು ಕರೆತಂದಿರುವ ಮಾಹಿತಿ ಬಂದಿದ್ದು, ಇವುಗಳನ್ನು ಬಲಿ ನೀಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಧಾರವಾಡ ಬಸವ ನಗರದ ಶ್ರೀ. ವಿನಯ ಕ್ಷತ್ರಿಯ ಇವರು ತಮ್ಮ ಸ್ವಂತ ಕೆಲಸಕ್ಕಾಗಿ RENAULT KWID CAR ಖರೀದಿಸಿ ಅದಕ್ಕೆ ಎದುರುದಾರರ ಬಳಿ ರೂ.6,750/- ಹಣ ಪಾವತಿಸಿ ವಿಮೆಯನ್ನು ಪಡೆದಿದ್ದರು. ಆ ವಿಮೆಯಲ್ಲಿ ವಾಹನದ ಆಯ್.ಡಿ. ಮೌಲ್ಯ ರೂ.3 ಲಕ್ಷ ಅಂತಾ ನಮೂದಿಸಿತ್ತು.
ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಜೊತೆಗೆ ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.