Bagalkote Lok Sabha Constituency: ಬಾಗಲಕೋಟೆ ಲೋಕಸಭೆ ಕ್ಷೇತ್ರ್ ಅಖಾಡಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಅಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು.ಯಾರಿಗೆ ಟಿಕೆಟ್ ಸಿಗುತ್ತೆ ಎನ್ನೋ ಕುತೂಹಲ ಕೂಡ ಇತ್ತು.ಸತತ ನಾಲ್ಕು ಬಾರಿ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುತ್ತ ಬಂದಿರುವ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ್ ಅವರಿಗೇನೆ ಬಿಜೆಪಿ ಪಕ್ಷ ಮತ್ತೆ ಮಣೆ ಹಾಕಿದ್ದು,ಪಿ.ಸಿ.ಗದ್ದಿಗೌಡರ್ ಅವರಿಗೆ ಟಿಕೆಟ್ ನೀಡಿದೆ.
Bidar Lok Sabha Constituency: 1952ರಿಂದ 2019ರವರೆಗಿನ ಬೀದರ್ ಲೋಕಸಭೆ ಕ್ಷೇತ್ರ ಹಲವು ನಾಯಕರನ್ನ ಪರಿಚಯಿಸಿದೆ. ಬೀದರ್ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳು ಸೇರಿದಂತೆ ಕಲಬುರರ್ಗಿ ಜಿಲ್ಲೆಯ ಎರಡು ಕ್ಷೇತ್ರಗಳು ಬೀದರ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಸದ್ಯಕ್ಕೆ ಕ್ಷೇತ್ರದಲ್ಲಿ ರಾಜಕೀಯ ಬಲಾಬಲ ನೋಡಬೇಕಾದ್ರೆ ಬಿಜೆಪಿಯ ಐವರು ಶಾಸಕರು, ಮೂವರು ಕಾಂಗ್ರೆಸ್ ಶಾಸಕರು ಪ್ರತಿನಿಧಿಸುತ್ತಿದ್ದಾರೆ.
ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯಲಿರುವ ಏಪ್ರಿಲ್ 19 ರ ಬೆಳಿಗ್ಗೆ 7.00 ರಿಂದ ಜೂನ್ 1 ರ ಸಂಜೆ 6.30 ರ ನಡುವೆ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಮತ್ತು ಬಿಜೆಪಿ ಅಭ್ಯರ್ಥಿ ಅನಿಲ್ ಆಂಟೋನಿ ಅವರು ಸ್ಪರ್ಧಿಸುತ್ತಿರುವ ಕೇರಳ ಕ್ಷೇತ್ರದಲ್ಲಿ ಸೋಲನುಭವಿಸುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆಂಟನಿ ಹೇಳಿದ್ದಾರೆ.
ದೇಶದ ಆದಿವಾಸಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅತ್ಯಲ್ಪ ಪ್ರಮಾಣದ ಹಣವನ್ನು ಖರ್ಚು ಮಾಡುತ್ತಿದೆ ಮತ್ತು ಆರ್ಥಿಕ ಸಮೀಕ್ಷೆಯ ನಂತರದ ಜಾತಿ ಗಣತಿಯು ಈ ವಿಷಯದಲ್ಲಿ ಸರ್ಕಾರದ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
ರಾಜಕೀಯದಲ್ಲಿ ಒಂದು ಪಕ್ಷದ ಸಿದ್ಧಾಂತ ಇದ್ದರೆ ಸಾಯುವವರೆಗೂ ಸೇವೆ ಮಾಡುತ್ತಲೇ ಇರುತ್ತಾರೆ. ಚುನಾವಣಾ ರಾಜಕೀಯಕ್ಕೂ ಸಕ್ರಿಯ ರಾಜಕೀಯಕ್ಕೂ ವ್ಯತ್ಯಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Karnataka Politics: ನಾನು ಪ್ರಥಮವಾಗಿ ರಾಜಕೀಯಕ್ಕೆ ಸ್ಪರ್ಧೆ ಮಾಡಿದಾಗ ಕೃಷ್ಣ ಅವರು ಆಶೀರ್ವಾದ ಮಾಡಿದ್ದರು. ಆ ಸಂಗತಿಯನ್ನು ಮಾತುಕತೆಯ ವೇಳೆ ಹಿರಿಯರಾದ ಕೃಷ್ಣ ಅವರೇ ನೆನೆಸಿಕೊಂಡರು. ನನ್ನನ್ನು ಆಶೀರ್ವಾದ ಮಾಡಿ ನಾಡಿನ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ ಎಂದರು ಕುಮಾರಸ್ವಾಮಿ ಅವರು
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದ ರೂ.5.60 ಕೋಟಿ ನಗದು, 3 ಕೆ.ಜಿ ಚಿನ್ನ (ಅಂದಾಜು ರೂ.1.40 ಕೋಟಿ ಮೌಲ್ಯ), 68 ಕೆ.ಜಿ ಬೆಳ್ಳಿ (ರೂ.21.50 ಲಕ್ಷ ಮೌಲ್ಯ), 103 ಕೆ.ಜಿ ಹಳೆ ಬೆಳ್ಳಿ (ರೂ.20.50 ಲಕ್ಷ ಮೌಲ್ಯ) ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
CM Siddaramaiah: ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ ಸಮ್ಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Election 2024: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.
Lok Sabha Election 2024: ಪ್ರೊ.ರಾಜೀವ್ ಗೌಡ ಸಮರ್ಥ ಸಂಸದ ಆಗುವ, ನಾಡಿನ ಜನತೆಯ ಧ್ವನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯವೆಂದು ಸಿಎಂ ಸಿದ್ದರಾಮಯ್ಯನವರು ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿಗೆ ಹೋಲಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್ನಲ್ಲಿ ಈಗಲೂ ಅಭಿಮಾನಿಗಳು ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಕ್ರಿಕೆಟ್ನಲ್ಲಿ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಅಂತಾ ಟೀಕಿಸಿದ್ದಾರೆ.
Lok Sabha election 2024: ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ|| ಕೆವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು
Lok Sabha Election 2024: ಚುನಾವಣೆ ದಿನ ಚುನಾವಣಾ ಕೇಂದ್ರದ ಬಳಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ.
Lok Sabha Election 2024: ಅಖಂಡ 09-ಬಳ್ಳಾರಿ ಲೋಕಸಭಾ ಕ್ಷೇತ್ರವು ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ ಗ್ರಾಮೀಣ, ಬಳ್ಳಾರಿ ನಗರ, ಸಂಡೂರು, ಹಾಗೂ ಕೂಡ್ಲಿಗಿ ಸೇರಿದಂತೆ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ವಿಧಾನಸಭಾ ಕ್ಷೇತ್ರವು ಮಾತ್ರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.