ಭಾರತದ ಹಳ್ಳಿಗಳಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಗ್ರಾಮ್ ಸ್ವರಾಜ್ ಮತ್ತು ಸ್ವಾಮಿತ್ವಾ ಯೋಜನೆ ಎಂಬ ಎರಡು ವೆಬ್ ಪೋರ್ಟಲ್ಗಳನ್ನು ಶುಕ್ರವಾರ ಬಿಡುಗಡೆ ಮಾಡಿದರು.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಇಂದು ಗ್ರಾಮದಲ್ಲಿರುವ ಆಸ್ತಿ-ಪಾಸ್ತಿಗೆ ಸಂಬಂಧಿಸಿದಂತೆ 'ಸ್ವಾಮಿತ್ವ ಯೋಜನೆ'ಯನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ದೇಶಾದ್ಯಂತ ಇರುವ ಗ್ರಾಮ ಪಂಚಾಯ್ತಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸುದ್ದು, ಈ ಸಂದರ್ಭದಲ್ಲಿ ಅವರು ತಮ್ಮ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಕುರಿತು ಘೋಷಣೆ ಮಾಡಿದ್ದಾರೆ.
ಈ ಕುರಿತು ನಡೆಸಲಾಗಿರುವ ಸರ್ವೆಯೊಂದರ ಪ್ರಕಾರ, ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೊರೊನಾ ಮಹಾಮಾರಿಯಿಂದ ಉದ್ಭವಿಸಿರುವ ಸ್ಥಿತಿಯನ್ನು ಅತ್ಯಂತ ಪ್ರಭಾವಶಾಲಿಯಾಗಿ ನಿಯಂತ್ರಿಸಿದೆ ಎಂದು ಹೇಳಿದೆ
'ರಾಮಾಯಣ' ದಿನಗಳು ಮತ್ತೆ ಬಂದಿವೆ ಅದು ಹೇಗೆ ಅಂತೀರಾ? ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ವಿಧಿಸಿರುವ ಲಾಕ್ ಡೌನ್ ಸಮಯದಲ್ಲಿ ಈಗ ಟಿವಿಯಲ್ಲಿ ಹಳೆಯ ಜನಪ್ರಿಯ ಕಾರ್ಯಕ್ರಮಗಳು ಮರು ಪ್ರಸಾರವಾಗುತ್ತಿವೆ.
ಯಾವುದೇ ಪರಿಸ್ಥಿತಿಯಲ್ಲಿ ಕೊರೊನಾ ವೈರಸ್ ಅನ್ನು ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಹರಡುವುದನ್ನು ತಡೆಹಿಡಿಯಬೇಕಾಗಿದೆ. ಇದೇ ಒಂದು ಉದ್ದೇಶದಿಂದ 15 ದಿನಗಳ ಬದಲಾಗಿ ಮುಂದಿನ 19 ದಿನಗಳ ವರೆಗೆ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಮೇ. 03ರವರೆಗೆ ದೇಶಾದ್ಯಂತ ಲಾಕ್ ಡೌನ್ ಮುಂದುವರೆಯಲಿದ್ದು, ಮೊದಲಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಇದನ್ನು ಮುಂದುವರೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದಕ್ಷಿಣ ಚಿತ್ರರಂಗದ ಹಿರಿಯ ನಟ ಹಾಗೂ ಪಾಲಿಟಿಶಿಯನ್ ಕಮಲ್ ಹಾಸನ್ ಪಾಲಿಗೆ ಲಾಕ್ ಡೌನ್ ನಿರ್ಣಯ ಚಿಂತೆಯ ವಿಷಯವಾಗಿ ಪರಿಣಮಿಸಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.
ಕೊರೊನಾ ವೈರಸ್ ವಿರುದ್ಧದ ಹೋರಾಟದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೊಡ್ಡ ನಿರ್ಧಾರವೊಂದನ್ನು ಕೈಗೊಂಡಿದ್ದು, ಮುಂಬರುವ ಒಂದು ವರ್ಷಗಳ ಅವಧಿಗೆ ಎಲ್ಲಾ ಸಂಸದರ ವೇತನವನ್ನು ಶೇ.30 ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ. ಅವರ ಈ ವೇತನ ಕಡಿತದಿಂದ ಉಳಿತಾಯವಾಗುವ ಹಣವನ್ನು ಕೊರೊನಾ ವೈರಸ್ ವಿರುಧ್ಧದ ಹೋರಾಟಕ್ಕಾಗಿ ಬಳಸಲಾಗುವುದು ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಇಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯೊಂದನ್ನು ಹೊರಡಿಸಲಿದೆ. ಅಷ್ಟೇ ಅಲ್ಲ ಸಂಸತ್ತಿನ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ರಾಜ್ಯಪಾಲರೂ ಸಹ ತಮ್ಮ ಒಂದು ವರ್ಷದ ವೇತನದಲ್ಲಿ ಶೇ.30ರಷ್ಟು ವೇತನವನ್ನು ಕಡಿಮೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 5 ರಂದು 9 ನಿಮಿಷಗಳ ಕಾಲ ತಮ್ಮ ತಮ್ಮ ಮನೆ ದೀಪಗಳನ್ನು ಆರಿಸಿ, ಮೇಣದ ದೀಪ ಬೆಳಗಲು ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಖ್ಯಾತ ಬಾಲಿವುಡ್ ನಟಿ ತಾಪಸಿ ಪನ್ನು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದ ಅವರು ಸಾಮಾಜಿಕ ಮಾಧ್ಯಮಗಳ ಮೇಲೆ ನೆಟ್ಟಿಗರ ಟ್ರೋಲ್ ಗೆ ಗುರಿಯಾಗಿದ್ದಾರೆ.
ಮಾನವತೆಯಿಂದ ಕೂಡಿದ ಪ್ರತಿಯೋರ್ವ ದಾಯಿಯರಿಗೆ ನನ್ನ ನಮನ ಎಂದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಸೇವಾ ಭಾವನೆಗೆ ಸರಿಸಾಟಿ ಇಲ್ಲ ಎಂದಿದ್ದಾರೆ. ಭಾರತದಂತಹ 130 ಕೋಟಿ ಜನಸಂಖ್ಯೆಯುಳ್ಳ ದೇಶವನ್ನು ಕೊರೊನಾ ವೈರಸ್ ನಿಂದ ರಕ್ಷಿಸಲು ಲಾಕ್ ಡೌನ್ ಬಿಟ್ಟರೆ ಬೇರೆ ಮಾರ್ಗವೇ ಇರಲಿಲ್ಲ.
ಮೂರು ವಾರಗಳ ಕಾಲ ರಾಷ್ಟ್ರೀಯ ಲಾಕ್ಡೌನ್ ಘೋಷಿಸಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ, "ಮಹಾಭಾರತದ ಯುದ್ಧವನ್ನು 18 ದಿನಗಳಲ್ಲಿ ಗೆದ್ದಿದೆ, ಇಡೀ ದೇಶವು ಕರೋನವೈರಸ್ ವಿರುದ್ಧ ಹೋರಾಡುತ್ತಿರುವ ಯುದ್ಧವು 21 ದಿನಗಳನ್ನು ತೆಗೆದುಕೊಳ್ಳುತ್ತದೆ" ಎಂದು ಹೇಳಿದರು.
ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ದೇಶಾದ್ಯಂತ ದೇಶಾದ್ಯಂತ ಬೀಗ ಹಾಕುತ್ತಿರುವ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತುರ್ತು ಕ್ರಮಗಳನ್ನು ಘೋಷಿಸಬೇಕು ಮತ್ತು ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ವೇತನ ಬೆಂಬಲವನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು. .
ಕೊರೊನಾವೈರಸ್ ಕಾಯಿಲೆ ಕೋವಿಡ್ -19 ಅನ್ನು ನಿಭಾಯಿಸಲು ಸರ್ಕಾರದ ಕಠಿಣ ಪ್ರಯತ್ನಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಡೀ ದೇಶವನ್ನು ಸಂಪೂರ್ಣ ಲಾಕ್ ಡೌನ್ ಎಂದು ಘೋಷಿಸಿದ್ದಾರೆ.
ದೇಶಾದ್ಯಂತ ಕೊರೊನಾ ವೈರಸ್ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ. ಈ ಪ್ರಕರಣ ಬಿಹಾರದ ರಾಜಧಾನಿ ಪಟ್ನಾದಿಂದ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಈ ವ್ಯಕ್ತಿ ಕತಾರ್ ನಿಂದ ಭಾರತಕ್ಕೆ ಮರಳಿದ್ದ ಹಾಗೂ ಪಟ್ನಾ AIIMSನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ.
ಇಂದು ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ ತಾವಿದ್ದ 18 ವರ್ಷಗಳ ಪಕ್ಷದಂತೆ ಈಗ ಕಾಂಗ್ರೆಸ್ ಪಕ್ಷವಿಲ್ಲ ಎಂದು ಹೇಳಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿ ದೇಶದ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.