Congress Manifesto for UP Election: ಉತ್ತರ ಪ್ರದೇಶದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ಧಪಡಿಸಿದ್ದು, ಉಚಿತ ಸಿಲಿಂಡರ್ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
UP Election 2022: ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಅವರು ಶನಿವಾರ Uttara Pradeshದ ಬಾರಾಬಂಕಿಯ ಹರಖ್ ಬಜಾರ್ನಿಂದ 3 ಪ್ರತಿಜ್ಞಾ ಯಾತ್ರೆಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದ ಜನತೆಗೆ ಹಲವು ಭರವಸೆಗಳನ್ನು ನೀಡಿದ್ದಾರೆ.
UP Assembly Elections 2022 - ಮಹಿಳೆಯರನ್ನು ರಾಜಕೀಯದ ಮುಖ್ಯವಾಹಿನಿಗೆ ತರುವುದು ತಮ್ಮ ಪ್ರಮುಖ ಉದ್ದೇಶವಾಗಿದ್ದು, ಇದಕ್ಕಾಗಿ ತಮ್ಮ ಪಕ್ಷವು ಈ ಬಾರಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂಬ ದೊಡ್ಡ ಘೋಷಣೆಯನ್ನು ಮೊಳಗಿಸಿದ್ದಾರೆ.
ಲಖಿಂಪುರ್ ಖೇರಿಯ ರೈತರ ಹತ್ಯಾಕಾಂಡದ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಮಂತ್ರಿ, ಅವರು ಮಂತ್ರಿ ಮಗನನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನಕ್ಕೆ ಬಿಜೆಪಿ ಆಡಳಿತದ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶಿವಸೇನಾ ಸಂಸದ ಸಂಜಯ್ ರಾವುತ್, "ಕಾನೂನು ಎಲ್ಲರಿಗೂ ಸಮಾನವಾಗಿದ್ದರೆ ಪ್ರಿಯಾಂಕಾ ಗಾಂಧಿ ಏಕೆ ಜೈಲಿನಲ್ಲಿರಬೇಕು, ಇನ್ನೊಂದೆಡೆಗೆ ಮಂತ್ರಿ ಏಕೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ" ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಿಎಂ ಅಮರಿಂದರ್ ಸಿಂಗ್ ಜೊತೆಗಿನ ಜಟಾಪಟಿಯಲ್ಲಿ ಗಾಂಧಿ ಕುಟುಂಬದ ಬೆಂಬಲ ಪಡೆದಿದ್ದ ನವಜೋತ್ ಸಿದ್ದು, ಈಗ ತಮಗೆ ಪೋಸ್ಟ್ ಇರಲಿ ಅಥವಾ ಇಲ್ಲದಿರಲಿ ರಾಹುಲ್ ಗಾಂಧೀ ಮತ್ತು ಪ್ರಿಯಾಂಕಾ ಗಾಂಧೀ ಪರವಾಗಿ ನಿಲ್ಲುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಊಹಾಪೋಹಗಳು ಮತ್ತು ವದಂತಿಗಳು ಹರಿದಾಡುತ್ತಿವೆ, ಮತ್ತು ಈ ವಿಷಯದ ಗೊಂದಲವನ್ನು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಪರಿಹರಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ತಮ್ಮನ್ನು ತಾವು ಪ್ರಸ್ತುತಪಡಿಸುವ ವಿಧಾನವನ್ನು ನಿರ್ಧರಿಸುವುದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರದ್ದು, ಅವರು ಉತ್ತಮ ಕ್ಯಾಪ್ಟನ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಪ್ರಧಾನಿ ಲೋಕಸಭಾ ಕ್ಷೇತ್ರದ ವಾರಣಾಸಿಯಲ್ಲಿನ ನೇಕಾರರ ದುಃಸ್ಥಿತಿಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹತ್ರಾಸ್ ಗೆ ತೆರಳಿ ಸಂತ್ರಸ್ಥ ದಲಿತ ಮಹಿಳೆ ಕುಟುಂಬಕ್ಕೆ ನೀಡಿ ಸಾಂತ್ವಾನ ಹೇಳಿದರು.ಇದಕ್ಕೂ ಮೊದಲು ಅವರಿಗೆ ಹತ್ರಾಸ್ ಗೆ ಭೇಟಿ ನೀಡಲು ನಿರಾಕರಿಸಲಾಗಿತ್ತು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಲೋಧಿ ಎಸ್ಟೇಟ್ನಲ್ಲಿನ ವಸತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ಬಾಕಿ ಹಣವನ್ನು ಪಾವತಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.