ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಭುಮು ಅಥಿತಿ ಗೃಹದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ಜೊತೆಗೆ ಸೋನಿಯಾ ಕೂಡ ಸುಮಾರು 9 ಗಂಟೆಗೆ ಫರ್ಸ್ಟ್ ಗಂಜ್ ಏರ್ಪೋರ್ಟ್ ತಲುಪಲಿದ್ದಾರೆ. ಇಲ್ಲಿಂದ ಸುಮಾರು 9:30ಕ್ಕೆ ಕಾರಿನಲ್ಲಿ ಅತಿಥಿ ಗೃಹಕ್ಕೆ ಸೋನಿಯಾ ಆಗಮಿಸಲಿದ್ದಾರೆ.
ಸ್ವರಾಜ್ ಭವನ ತಲುಪಲಿರುವ ಪ್ರಿಯಾಂಕ ಗಾಂಧಿ ಸಂಜೆ ಪಕ್ಷದ ಉನ್ನತ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಮೈತ್ರಿಪಕ್ಷ ಶಿವಸೇನಾ ಹೇಳಿದೆ. ಇದೇ ವೇಳೆ ಅದು ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿ ಜನರ ನೈಜ ಸಮಸ್ಯೆಗಳ ಬಗ್ಗೆ ಮಾತನಾಡದೆ ಇರುವುದು ಬಿಜೆಪಿ ಸೋಲುತ್ತಿರುವುದರ ಸೂಚನೆ ಎಂದು ಹೇಳಿದರು.
ಆಗಸ್ಟ್ 4, 2014ರಲ್ಲಿ ಬಾಂಬೆ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ಆಯೋಗವು, ಮಕ್ಕಳನ್ನು ಚುನಾವಣೆ ಪ್ರಚಾರಗಳಲ್ಲಿ ಬಳಸಿಕೊಳ್ಳಬಾರದು ಎಂದು ಹೇಳಿರುವುದನ್ನು ಮಕ್ಕಳ ರಕ್ಷಣಾ ಆಯೋಗ ಒತ್ತಿ ಹೇಳಿದೆ.
ವೈರಲ್ ಆಗಿರುವ ವೀಡಿಯೋದಲ್ಲಿ ಪ್ರಧಾನಿ ಮೋದಿ ವಿರುದ್ಧ ಅಸಭ್ಯ ಘೋಷಣೆ ಕೂಗಿದ ಮಕ್ಕಳಿಗೆ ಪ್ರಿಯಾಂಕಾ ಗಾಂಧಿ ತಡೆಯೊಡ್ಡಿ ಬುದ್ದಿ ಹೇಳಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಈಗ ಬಿಜೆಪಿಯನ್ನು ಕಟ್ಟಿಹಾಕಲು ಸೂತ್ರವೊಂದನ್ನು ಹೆಣೆದಿದ್ದಾರೆ.ಈಗ ಈ ಸೂತ್ರದ ಪ್ರಕಾರ ಬಿಜೆಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇಂತಹ ಮಹತ್ವದ ಸಂಗತಿಯೊಂದನ್ನು ಈಗ ಸ್ವತ ಪ್ರಿಯಾಂಕಾ ಗಾಂಧಿಯವರೇ ಬಹಿರಂಗಪಡಿಸಿದ್ದಾರೆ.
ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಷ್ಟ್ರೀಯತೆ ಎಂದರೆ ಜನರ ಸಮಸ್ಯೆಗಳನ್ನು ಬಗೆ ಹರಿಸುವುದೇ ಹೊರತು ಅವುಗಳನ್ನು ಹತ್ತಿಕ್ಕುವುದಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ಅಮೇಥಿಯಲ್ಲಿ ಕೇಂದ್ರ ಮಂತ್ರಿ ಸ್ಮೃತಿ ಇರಾನಿ ಶೂಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕಾ ಮಾಧ್ಯಮಗಳ ಎದುರಿಗೆ ಇವೆಲ್ಲವನ್ನೂ ಮಾಡುತ್ತಿರುವುದು ತಪ್ಪು ಎಂದರು.
ಕಾಂಗ್ರೆಸ್ ಪಕ್ಷದಲ್ಲಿನ ಸಂಘಟನಾ ಜವಾಬ್ದಾರಿಯನ್ನು ನಿಭಾಯಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ತಿಳಿಸಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಗೆ ಗಾಯಗೊಂಡ ಮಹಿಳೆಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಜವಾಬ್ದಾರಿಯನ್ನು ಪ್ರಿಯಾಂಕ ಗಾಂಧಿ ವಹಿಸಿದ್ದು, ಕ್ಷಣ ಕ್ಷಣಕ್ಕೂ ಆಕೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದು 50-50 ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಝೀ ನ್ಯೂಸ್ ಗೆ ಮೂಲಗಳು ತಿಳಿಸಿವೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಜೊತೆಗೆ ಕೇರಳದ ವಯನಾಡಿನಲ್ಲಿಯೂ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.ಇಂದು ನಾಮಪತ್ರ ಸಲ್ಲಿಸುವ ವೇಳೆ ರಾಹುಲ್ ಗಾಂಧಿ ಜೊತೆಗೆ ಸಾಥ್ ನೀಡಿದ ಪ್ರಿಯಾಂಕಾ ಗಾಂಧಿ ಈಗ ಟ್ವೀಟ್ ಮೂಲಕ ವಯನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಮ್ಮ ಕ್ಷೇತ್ರದ ವಾರಣಾಸಿಯಲ್ಲಿ ಒಂದೇ ಹಳ್ಳಿಗೆ ಭೇಟಿ ನೀಡಲು ಸಮಯ ಸಿಕ್ಕಿಲ್ಲ ಎನ್ನುವುದು ಆಶ್ಚರ್ಯವಾಗುತ್ತದೆ ಎಂದು ಪ್ರಿಯಂಕಾ ಗಾಂಧಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.