ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕ್ರಿಕೆಟ್ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತೆ ಬೌಂಡರಿ ಹಾಗೂ ಸಿಕ್ಸರ್ ಬಾರಿಸಲಿದ್ದಾರೆ.
ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ (ಆರ್ಎಸ್ಡಬ್ಲ್ಯುಎಸ್) ಎರಡನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಇಂಡಿಯಾ ಲೆಜೆಂಡ್ಸ್ ಅವರನ್ನು ಮುನ್ನಡೆಸಲಿದ್ದಾರೆ ಎಂದು ಆಯೋಜಕರು ಗುರುವಾರ (ಸೆಪ್ಟೆಂಬರ್ 1) ಘೋಷಿಸಿದ್ದಾರೆ. ಸೆಪ್ಟೆಂಬರ್ 10 ರಂದು ಪ್ರಾರಂಭವಾಗುವ 22 ದಿನಗಳ ಪಂದ್ಯಾವಳಿಯನ್ನು ವಿವಿಧ ಸ್ಥಳಗಳಲ್ಲಿ ಆಡಲಾಗುತ್ತದೆ.
ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡುಲ್ಕರ್ ಭಾನುವಾರ(ಆ.21) ನಡೆಯಲಿರುವ ಮುಂಬೈ ಹಾಫ್ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಲಿದ್ದಾರೆ. ಕೋವಿಡ್ ಬಳಿಕ ಇದೇ ಮೊದಲ ಬಾರಿಗೆ ಸ್ಪರ್ಧೆ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಸುಮಾರು 13500ಕ್ಕೂ ಹೆಚ್ಚು ಓಟಗಾರರು ಪಾಲ್ಗೊಳ್ಳಲಿದ್ದಾರೆ.
ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಆಟದ ಸಮಯದ ಕೊರತೆಯಿಂದಾಗಿ ಮುಂಬೈ ತಂಡವನ್ನು ತೊರೆದು ಈಗ ಗೋವಾಗೆ ಸೇರಿದ್ದಾರೆ.ಎಡಗೈ ವೇಗದ ಬೌಲರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಕಳೆದ ವರ್ಷ ಜನವರಿಯಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡದ ಪರವಾಗಿ 2 ಟಿ 20 ಪಂದ್ಯಗಳನ್ನು ಆಡಿದ್ದರು.
ಮಾಸ್ಟರ್ ಬ್ಲಾಸ್ಟರ್, ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಭಾರತ ಮಾತ್ರವಲ್ಲದೆ ವಿಶ್ವದ ಶ್ರೇಷ್ಠ ಬ್ಯಾಟ್ಸ್ಮನ್. ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೂಡ ಸಚಿನ್. 24 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಅವರು ಭಾರತೀಯ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶನಿವಾರದಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ 49ನೇ ಜನ್ಮದಿನಕ್ಕೆ ಕಾಲಿರಿಸಿದ್ದಾರೆ. ವಿಶ್ವಕ್ರಿಕೆಟ್ ಕಂಡ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ಅವರ ಹುಟ್ಟುಹಬ್ಬಕ್ಕೆ ಕೋಟ್ಯಂತರ ಅಭಿಮಾನಿಗಳು ಶುಭ ಕೋರಿದ್ದಾರೆ.
ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಕೇವಲ 56 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕವನ್ನು ಗಳಿಸಿದರು.ಟೈಮಲ್ ಮಿಲ್ಸ್ ಅವರ ಎಸೆತದಲ್ಲಿ ಬೌಂಡರಿ ಗಳಿಸುವ ಮೂಲಕ ಶತಕವನ್ನು ಗಳಿಸಿದರು.ಅವರ ಈ ಭರ್ಜರಿ ಇನಿಂಗ್ಸ್ ನಲ್ಲಿ ಬರೋಬ್ಬರಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳನ್ನು ಸಿಡಿಸಿದರು.
ದಂತಕಥೆ ಸಡನ್ ಆಗಿ ಸೃಷ್ಟಿಯಾವುದಿಲ್ಲ, ಅದಕ್ಕೆ ತನ್ನದೇ ಆದ ವಿಶಿಷ್ಟ ಪ್ರಯಾಣವಿರುತ್ತದೆ.ಹೌದು, ಸಾಧನೆಯ ಮೇರು ಪರ್ವತವನ್ನು ಏರಿದಾಗ ಆರಂಭಿಕ ಪ್ರಯಾಣದ ಅನುಭವಗಳನ್ನು ಮೆಲಕು ಹಾಕಿದಾಗ ಒಂದು ರೀತಿಯ ರೋಚಕ ಅನುಭವನ್ನು ನೀಡುತ್ತವೆ.
Mithali Raj: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಜೊತೆಗೆ ಮಿಥಾಲಿ ರಾಜ್ (Mithali Raj) ಕೂಡ ಎಲೈಟ್ ಕ್ಲಬ್ ಸೇರಿದ್ದಾರೆ. ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಮಿಥಾಲಿ ಪ್ರಸ್ತುತ ಆರನೇ ವಿಶ್ವಕಪ್ ನಲ್ಲಿ ಆಡುತ್ತಿದ್ದಾರೆ.
ಏಕದಿನ, ಟಿ-20 ಹಾಗೂ ಟೆಸ್ಟ್ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳಲ್ಲಿಯೂ ಓಜಾ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದರು. ಆದರೆ ಅವಕಾಶಗಳ ಕೊರತೆ ಅವರ ವೃತ್ತಿಜೀವನಕ್ಕೆ ದೊಡ್ಡ ಪೆಟ್ಟು ನೀಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.