ತಿಂಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಪ್ರಶಾಂತ್ ಕಿಶೋರ್ ಸೇರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು, ಆದರೆ ಕಾಲಾಂತರದಲ್ಲಿ ಅವರು ಕಾಂಗ್ರೆಸ್ ಗೆ ಸೇರುವ ನಿರ್ಧಾರದಿಂದ ಹಿಂದೆ ಸರಿದಿದ್ದರು.ಈಗ ಅವರು ತಾವು ಕಾಂಗ್ರೆಸ್ ಪಕ್ಷದ ಜೊತೆ ಯಾಕೆ ಕೆಲಸ ಮಾಡುವುದಿಲ್ಲ ಎನ್ನುವುದರ ಕುರಿತಾಗಿ ಬಹಿರಂಗವಾಗಿ ಹೇಳಿದ್ದಾರೆ.
ಪಕ್ಷ ಸಂಕಟದಲ್ಲಿದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ‘ಭಾರತ್ ಜೋಡೋ’ ಪಾದಯಾತ್ರೆಗೆ ಹೊರಟಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಉದಯಪುರದಲ್ಲಿ ತನ್ನ ಚಿಂತನ-ಮಂಥನ ಅಧಿವೇಶನವನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ತಳಮಟ್ಟದಲ್ಲಿ ಪ್ರಸ್ತಾಪಿಸಲು ಪಾದಯಾತ್ರೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ನಲ್ಲಿ ಸಾಂಸ್ಥಿಕ ಬದಲಾವಣೆಗಳ ಕರೆಗಳ ಮಧ್ಯೆ, ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಅವರು ರಾಹುಲ್ ಗಾಂಧಿ ಪಕ್ಷದ ಜವಾಬ್ದಾರಿಯನ್ನು ಸ್ವೀಕರಿಸಲು ಸಿದ್ಧರಿಲ್ಲದಿದ್ದರೆ ಅದರ ನಾಯಕತ್ವವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರೊಂದಿಗೆ ಪ್ರಶಾಂತ್ ಕಿಶೋರ್ ಸರಣಿ ಸಭೆ ನಡೆಸಿದ್ದರು. ಕಳೆದ ಹಲವಾರು ದಿನಗಳಿದ ರಾಜಕೀಯ ನಿಪುಣನ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷವು ಐಪ್ಯಾಕ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ, ಮುಂದಿನ ವರ್ಷ ತೆಲಂಗಾಣದಲ್ಲಿ ಚುನಾವಣೆ ಇರುವುದರ ಹಿನ್ನಲೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸಂಸ್ಥೆ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ.ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
2024 ರ ಸಾರ್ವತ್ರಿಕ ಚುನಾವಣೆಗೆ ಈಗಲೇ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರದಂದು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರೊಂದಿಗೆ ಮೂರನೇ ಸಭೆಯನ್ನು ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ನ ಉನ್ನತ ನಾಯಕರ ಜೊತೆ ಶನಿವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ ಅವರು ಮುಂದಿನ ದಿನಗಳಲ್ಲಿ ಪಕ್ಷವನ್ನು ಸೇರಲಿದ್ದಾರೆ ಆದರೆ ಅವರು ಯಾವುದೇ ಹುದ್ದೆಯ ಪ್ರಸ್ತಾಪವನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ಮತ್ತು ಅವರ ತಂದೆ ಕರಣ್ ಸಿಂಗ್ ಅವರು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಇತಿಹಾಸವನ್ನು ಸೃಷ್ಟಿಸಲಿದ್ದು, ಅವರು 30 ವರ್ಷಗಳ ನಂತರ ಮೊದಲ ಬಾರಿಗೆ ಸತತ ಎರಡನೇ ಅವಧಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ವರದಿಗಳ ಪ್ರಕಾರ ಈ ಸಮಾರಂಭದಲ್ಲಿ ಒಟ್ಟು 200 ವಿವಿಐಪಿಗಳು ಭಾಗವಹಿಸಲಿದ್ದಾರೆ.
Veerappa Moily On BJP - ಪಂಚರಾಜ್ಯಗಳ ಚುನಾವಣಾ ಫಲಿತಾಂಶದ (Five State Election Results 2022) ಬಳಿಕ ಕಾಂಗ್ರೆಸ್ನಲ್ಲಿ ಒಂದೆಡೆ ಭಾರೀ ಆಂತರಿಕ ಕಲಹ ಏರ್ಪಟ್ಟಿದೆ. ಇನ್ನೊಂದೆಡೆ, ಕಾಂಗ್ರೆಸ್ನ ಹಿರಿಯ ನಾಯಕ ವೀರಪ್ಪ ಮೊಯ್ಲಿ (Veerappa Moily) ಸೋಲಿನಿಂದ ಉಂಟಾದ ಗಾಯವನ್ನು ಗುಣಪಡಿಸಲು ಪ್ರಯತ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿರುವ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರನ್ನು ವಜಾಗೊಳಿಸಿದ ಒಂದು ದಿನದ ನಂತರ, ಪಕ್ಷದ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತದ ಚುನಾವಣಾ ರಾಜಕೀಯದಲ್ಲಿ ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಬುಧವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.